11/06/2025 10:19 AM

Translate Language

Home » ಲೈವ್ ನ್ಯೂಸ್ » ಬೀದರ್ | ಕೇಂದ್ರದ ಬಜೆಟ್ ನಿರಾಶಾದಾಯಕವಾಗಿದೆ : ವಿಜಯಸಿಂಗ್

ಬೀದರ್ | ಕೇಂದ್ರದ ಬಜೆಟ್ ನಿರಾಶಾದಾಯಕವಾಗಿದೆ : ವಿಜಯಸಿಂಗ್

Facebook
X
WhatsApp
Telegram

ಬೀದರ.02.ಫೆ.25:- ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ. ಈ ಬಜೆಟ್ ನಿರಾಶಾದಾಯಕವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಟೀಕಿಸಿದ್ದಾರೆ.

ಯುವಜನರನ್ನು ನಿರುದ್ಯೋಗ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಆದರೆ, ಆ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಯುವಕರು, ಮಹಿಳೆಯರು, ಬಡವರು ಹಾಗೂ ರೈತರ ಬಾಳು ಹಸನಾಗಿಸುವ ಮಹತ್ವದ ಯೋಜನೆ ಈ ಯೋಜನೆಗಳಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ತೆರಿಗೆ ಕಡಿತ ಮಾಡಿದ್ದಕ್ಕೆ ಬಿಜೆಪಿಯವರು ಚಪ್ಪಾಳೆ ತಟ್ಟಿದ್ದಾರೆ. ಆದರೆ, ಸಂಬಳ ಇದ್ದವರಿಗಷ್ಟೇ ಅದರ ಲಾಭ ಸಿಗಲಿದೆ. ಉದ್ಯೋಗವೇ ಇಲ್ಲದವರಿಗೆ ಸಂಬಳ ಎಲ್ಲಿಂದ ಬರುತ್ತದೆ. ತೆರಿಗೆ ವಿನಾಯಿತಿ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!