ಬೀದರ್ | ಗಡಿ ಭಾಗದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೀಸಲಾತಿ ಅವಶ್ಯಕತೆ ಇದೆ : ನರಸಪ್ಪಾ ಜಾನಕೆ

ಬೀದರ.30.ಜನವರಿ.25:- ಬೀದರ್ ಗಡಿ ಭಾಗದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಹುದ್ದೆಗಳಿಗಾಗಿ ಮೀಸಲಾತಿಯ ಅವಶ್ಯಕತೆ ಇದೆ ಎಂದು ನರಸಪ್ಪಾ ಜಾನಕೆ ಅಭಿಪ್ರಾಯಪಟ್ಟರು.

ಇಂದು ಯಾಕತಪೂರ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಶ ಏಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಂಡಿರುವ, ʼಗಡಿ ಭಾಗದಲ್ಲಿ ಕನ್ನಡ ಭಾಷೆ ಜಾಗೃತಿ ಸಾಹಿತ್ಯ ಮತ್ತು ಸಂಸ್ಕೃತಿಕ ಕಾರ್ಯಕ್ರಮʼವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜಿಲ್ಲೆ ಬಹು ರಾಜ್ಯ ಗಡಿಗಳಿಂದ ಕೂಡಿದೆ. ಇಲ್ಲಿನ ಜನರು ಪಂಚ ಭಾಷೆಗಳನ್ನು ಮಾತನಾಡುತ್ತಾರೆ. ಕನ್ನಡ ಈ ನೆಲದ ಭಾಷೆಯಾಗಿ ಇಲ್ಲಿನ ಜನ ಅಭಿಮಾನ, ಸ್ವಾಭಿಮಾನದಿಂದ ಭಾಷಾ ಪ್ರೇಮವನ್ನು ಬೆಳೆಸುತ್ತಿದ್ದಾರೆ ಎಂದರು.

ಡಾ.ಸುಬ್ಬಣ್ಣ ಕರಕನಳ್ಳಿ ಅವರು ಮಾತನಾಡಿ, ಪ್ರಗತಿಗೆ ಶಿಕ್ಷಣವೇ ಮೂಲ, ನಮ್ಮ ಎಲ್ಲಾ ಸಮಸ್ಯೆಗಳನ್ನು ಹೊಗಲಾಡಿಸುವ ಶಕ್ತಿ ಶಿಕ್ಷಣಕ್ಕೆ ಇದೆ.

ಕನ್ನಡ ಭಾಷೆ ಶಿಕ್ಷಣ ಅನ್ನದ, ಚಿನ್ನದ ಭಾಷೆಯಾಗಿದೆ. ಇದು ಏಕತೆ, ಭಾವೈಕ್ಯತೆಯ ಭಾಷೆಯಾಗಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಗುರು ಜಾವೀದ್ ಅಹಮ್ಮದ್ ಮಾತನಾಡಿ, ಕನ್ನಡ ಭಾಷೆ ಪ್ರತಿದಿನ ವ್ಯವಹಾರಿಕ ಭಾಷೆಯಾಗಬೇಕು. ಗಡಿ ಭಾಗದ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ದಾನಿಶ ಎಜುಕೇಷನ್ ಚಾರಿಟೇಬಲ್ ಟ್ರಸ್ಟನ ಅಧ್ಯಕ್ಷ ಗೌಸೋದ್ದೀನ್ ಕುಪೇಂದ್ರ ಹೊಸಮನಿ, ಗ್ರಾಮ ಪಂಚಾಯತ್ ಸದಸ್ಯೆ ರತ್ನಮ್ಮಾ ಗಣಾಪೂರ, ಸಂಜೀವಕುಮಾರ್ ದಳಪತಿ, ಸೈಯದ್ ಮುದ್ದೆ, ವಿನಾಯಕ್ ಚವ್ಹಾಣ್, ಕಮಲಾಕರ್, ಅರ್ಚನಾ, ಬಸವಶ್ರೀ, ತಾವರ ಬೇಗಂ ಹಾಗೂ ಕಾಸೀಬ್ ಮುಸ್ತಾಕಿನ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಗಡಿ ಭಾಗದ ಎಲ್ಲಾ ಸರಕಾರಿ ಶಾಲೆ ಕಾಲೇಜುಗಳಿಲ್ಲಿ ಕಲಿತ್ ವಿದ್ಯಾರ್ಥಿಗಳಿಗೆ ವಿಶೇಷವಾದ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿ ಜೀವನದಲ್ಲಿ

prajaprabhat

Recent Posts

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

5 minutes ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

10 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

33 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago