ಬೀದರ.13.ಫೆ.25:- ಇಂದು ನಗರದ ಶಾಂತಿ ಕಿರಣ ಚಾರಿಟೇಬಲ್ ಮತ್ತು ಏಜುಕೆಶನಲ್ ಸಂಸ್ಥೆಯ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರೇಮಸಾಗರ್ ದಾಂಡೆಕರ್ ಅಭಿಪ್ರಾಯಪಟ್ಟರು.
ಇಂದಿನ ಆಧುನಿಕ ಯುಗದಲ್ಲಿ ಪ್ರಯತ್ನಶೀಲರಾಗಿ ತಮ್ಮ ಗುರಿ ತಲುಪಬೇಕು. ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಲ್ಲಿ ಗೌರವ ಮನೋಭಾವದಿಂದ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಗುರುಗಳ ಸೂಕ್ತ ಮಾರ್ಗದರ್ಶನ ಪಡೆದಾಗ ಪ್ರತಿಫಲ ದೊರೆಯುತ್ತದೆ. ವಿದ್ಯಾರ್ಥಿಗಳು ನಿಷ್ಠೆ ಹಾಗೂ ಶ್ರದ್ಧೆಯಿಂದ ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.
ಡಾ.ಚಂದ್ರಕಾಂತ್ ಪಾಟಿಲ್ ಅವರು ಮಾತನಾಡಿ, ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣವು ಮಹತ್ತರವಾದ ಪಾತ್ರ ವಹಿಸುತ್ತದೆ.
ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಕೌಶಲ್ಯ ಬೆಳೆಸಿಕೊಂಡಾಗ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ.
ಶಿಕ್ಷಣವು ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಸಾಮಾಜಿಕ ಅರಿವು ಕೂಡ ಬೆಳೆಸಿಕೊಡುವಂತದ್ದಾಗಿದೆ ಎಂದು ಹೇಳಿ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಗಣೇಶಾನಂದ್ ಮಾಹಾರಾಜ್, ಕಾಲೇಜೀನ ನಿರ್ದೆಶಕಿ ಕಲ್ಪನಾ ಪಿ.ಮಠಪತಿ, ಪ್ರಾಚಾರ್ಯ ಮಂಗಲ ಎಮ್., ಉಪನ್ಯಾಸಕರಾದ ಪರಶುರಾಮ್ ಶಿಂಧೆ, ಆನಂದ್, ಸಂದೀಪ್, ಪೂಜಾ, ಜ್ಯೊತಿ, ಅಂಬಿಕಾ ಹೆಚ್, ಅಂಬಿಕಾ ಆರ್, ಲತಾ, ಮೇನಕ, ನಿತಾ, ಶಶಿಕಾಂತ್, ಅನೀಲ್, ಶಿವಕುಮಾರ್ ಬಾವಿಕಟ್ಟೆ ಹಾಗೂ ಎನ್.ಬಿ.ಮಹೇಶ್ ಸೇರಿದಂತೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…