ಬೀದರ್‌: ಬಂಜಾರರ ಸಮುದಾಯ ಹಕ್ಕಿಗಾಗಿ ಜನಾಂದೋಲನ.!

ಬೀದರ.02.ಮಾರ್ಚ.25:-ಬಂಜಾರ ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಿ ಹಕ್ಕಿಗಾಗಿ ಹೋರಾಡಲು ಸಂಘಟಿಸುವ ಉದ್ದೇಶದಿಂದ ಮಾ. 5ರಿಂದ 10ರ ವರೆಗೆ ಜನಾಂದೋಲನ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸೇವಾನಗರ ತಾಂಡಾದ ಶಿವಶಕ್ತಿ ಪೀಠದ ಗೋವಿಂದ ಮಹಾರಾಜ ಮಾಹಿತಿ ನೀಡಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋರಸೇನಾ ರಾಷ್ಟ್ರೀಯ ಸಂಘಟನೆ ರಾಜ್ಯ ಘಟಕದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸತತ ಆರು ದಿನ 15 ಜಿಲ್ಲೆಗಳಲ್ಲಿ 1,250 ಕಿ.ಮೀ ರಥಯಾತ್ರೆ ಸಂಚರಿಸಲಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸುಮಾರು 3,500ಕ್ಕೂ ಹೆಚ್ಚು ತಾಂಡಾಗಳಿವೆ. ಇದುವರೆಗೆ ಈ ಎಲ್ಲ ತಾಂಡಾಗಳ ಜನಸಂಖ್ಯೆ ಕುರಿತು ಯಾವುದೇ ವೈಜ್ಞಾನಿಕ ಅಧ್ಯಯನ ಆಗಿಲ್ಲ. ಪ್ರಸ್ತುತ ಮೀಸಲಾತಿ ಹಂಚಿಕೆ ಸಂಬಂಧ ರಚನೆಯಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ ಏಕಸದಸ್ಯ ಆಯೋಗಕ್ಕೆ ಸಮರ್ಪಕ ದತ್ತಾಂಶದ ಕೊರತೆಯೂ ಎದುರಾಗಹುದು ಎಂಬ ಆತಂಕ ಸಮಾಜಕ್ಕೆ ಇದೆ.

ರಾಜ್ಯದಾದ್ಯಂತ ಇರುವ ಗೋರ ಬಂಜಾರ ಜನಾಂಗದ ಸಂಪೂರ್ಣ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಂಡಾ ಜನರ ಏಳಿಗೆ, ಮುಖ್ಯ ವಾಹಿನಿಯಲ್ಲಿ ಭಾಗವಹಿಸುವಿಕೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾ. 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ, ಸರ್ಕಾರಕ್ಕೆ ನಮ್ಮ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಾಡಲಾಗುವುದು ಎಂದರು.

ಗೋರ ಶಿಖವಾಡಿ ಸಂಘಟನೆಯ ಜಿಲ್ಲಾಧ್ಯಕ್ಷ ಗೋವರ್ಧನ ರಾಠೋಡ್‌ ಮಾತನಾಡಿ  ಸಮಾಜದವರು ಮೂಢನಂಬಿಕೆಗಳ ಬಲಿ ಪಶು ಆಗುತ್ತಿದ್ದಾರೆ. ಸಂಘಟನಾತ್ಮಕವಾಗಿ ಒಂದಿಲ್ಲ. ಇದೆಲ್ಲ ಮನಗಂಡು ಈ ಕಾರ್ಯಕ್ರಮ ರೂಪಿಸಲಾಗಿದೆ. ರಥಯಾತ್ರೆಯೂ ಭಾಲ್ಕಿ ತಾಲ್ಲೂಕಿನ ಸೇವಾನಗರ ತಾಂಡಾದಿಂದ ಬೀದರ್‌  ಕಲಬುರಗಿ ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಮಾ. 10ರಂದು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಗೋರಸೇನಾ ಜಿಲ್ಲಾಧ್ಯಕ್ಷ ರಮೇಶ ಜಾಧವ  ಸವಿತಾಬಾಯಿ ರಾಠೋಡ್‌ ಬಾಬು ಜಾಧವ ನೀಲಕಂಠ ರಾಠೋಡ್‌  ಸುಧಾಕರ ರಾಠೋಡ್‌  ಅರವಿಂದ ರಾಠೋಡ್‌ ಕೃಷ್ಣ ರಾಠೋಡ್‌ ಹಾಜರಿದ್ದರು.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

2 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

2 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

2 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

2 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

2 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

7 hours ago