ಬೀದರ.15.ಜನವರಿ.25:- ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ನಡೆದಿದ್ದು, ದಧಿಬಸವಣ್ಣ ಪ್ರತಿಮೆಯ ಕೈ ಮುರಿದ ಘಟನೆ “ದಾಡಗಿ” ಕ್ರಾಸ್ ಬಳಿ ನಡೆದಿದ್ದು, ಕೃತ್ಯದ ವಿರುದ್ಧ ಆಕೋಶಗೊಂಡ ಬಸವ ಅನುಯಾಯಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ತಡ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಬಸವಣ್ಣನ ಪ್ರತಿಮೆಯ ಕೈ ಮುರಿದಿದ್ದಾರೆ ಎನ್ನಲಾಗಿದೆ.
ಈ ಘಟನೆ ವಿರುದ್ಧ ದಾಡಗಿ ಗ್ರಾಮದ ಬಸವ ಅನುಯಾಯಿಗಳು ಭಾಲ್ಕಿ-ಹುಮನಾಬಾದ್-ಬಸವಕಲ್ಯಾಣ ಮೂರು ತಾಲ್ಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಮೇಲೆ ಬೆಂಕಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ಮುಂದುವರೆಸಿದ ಬಸವ ಅನುಯಾಯಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಸ್ಠಾಧಿಕಾರಿಗಳು ಸ್ಥಳಕ್ಕೆ ತಕ್ಷಣವೇ ಬರಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ತಕ್ಷಣವೇ ಬಂದಿಸಬೇಕು…..
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…