ಬೀದರ.19.ಮಾರ್ಚ.25:- ಬೀದರ ಜಿಲ್ಲೆಯ ಜನರ ಬಹುದೀನದಿಂದ ವಂದೇ ಭಾರತ ಬೇಡಿಕೆ ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಬೇಕು’ ಎಂದು ಸಂಸದ ಸಾಗರ್ ಖಂಡ್ರೆ ಬೇಡಿಕೆ ಮಾಡಿದರೂ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಬೀದರ್-ಬೆಂಗಳೂರು ರೈಲಿನಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇನ್ನೂ ಎರಡು ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು.
ನವದೆಹಲಿಗೆ ಸಂಪರ್ಕ ಕಲ್ಪಿಸಲು ದಕ್ಷಿಣ ಎಕ್ಸ್ಪ್ರೆಸ್ ರೈಲನ್ನು ಬೀದರ್ವರೆಗೆ ವಿಸ್ತರಿಸಬೇಕು. ಚಿಂಚೋಳಿ ಮೂಲಕ ತಾಂಡೂರು-ಜಹೀರಾಬಾದ್ ಹೊಸ ರೈಲು ಮಾರ್ಗ ಆರಂಭಿಸಬೇಕು ಎಂದು ಗಮನ ಸೆಳೆದರು.
ಮಾನ್ಯತೆ ಪಡೆದ ಪತ್ರಕರ್ತರಿಗೆ ಶೇ 50ರ ರಿಯಾಯಿತಿಯಲ್ಲಿ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ಇತ್ತು. ಕೋವಿಡ್ನಲ್ಲಿ ಅದನ್ನು ಹಿಂಪಡೆಯಲಾಗಿತ್ತು. ಅದನ್ನು ಪುನರಾರಂಭಿಸಬೇಕು. ರೈಲ್ವೆ ಸುರಕ್ಷತೆ, ಮೂಲಸೌಕರ್ಯ, ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನಷ್ಟು ಸುಧಾರಣೆಗಳನ್ನು ತರಬೇಕು ಎಂದು ಹೇಳಿದರು.
ಪತ್ರಕರ್ತರ ರೈಲ್ವೆ ರಿಯಾಯಿತಿ ಪಾಸ್ ಕುರಿತು ಲೋಕಸಭೆಯಲ್ಲಿ ದನಿ ಎತ್ತಿದ ಸಾಗರ್ ಖಂಡ್ರೆ ಅವರ ಕ್ರಮವನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ವಿಜಯಕುಮಾರ ಪಾಟೀಲ ಸ್ವಾಗತಿಸಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿರುವುದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…