ಬೀದರ.04.ಮಾರ್ಚ.25:- ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾಯೋಜನೆ ಅನ್ವಯ ಬೀದರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಂ. ಕಛೇರಿಯ ಸಹಾಯಕರ ಹುದ್ದೆಯನ್ನು (ಗೌರವಧನ ಆಧಾರ) ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ವಿದ್ಯಾರ್ಹತೆ: ಬಿ.ಕಾಂ. ಪದವಿಯನ್ನು ಹೊಂದಿರಬೇಕು, ಬಿ.ಕಾಂ. ಪದವಿಯಲ್ಲಿ 60% ಪ್ರತಿಶತ ಮೇಲ್ಪಟ್ಟಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 3 ವರ್ಷಗಳ ಅನುಭವ ಹೊಂದಿರಬೇಕು.
ಲೆಕ್ಕಪತ್ರದಲ್ಲಿ ಬ್ಯಾಂಕ ವ್ಯವಹಾರಗಳನ್ನು ಸರ್ಕಾರದ ಲೆಕ್ಕ ಪತ್ರಗಳನ್ನು ತಯಾರಿಸುವ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ ರಜಿಸ್ಟರಗಳ ಕುರಿತು ಮಾಹಿತಿ ಹೊಂದಿರಬೇಕು.
ಅರ್ಹರು ಅರ್ಜಿಯನ್ನು ಸಲ್ಲಿಸಲು ನಿಗದಿತ ನಮೂನೆಗಳನ್ನು ಯೋಜನಾ ನಿರ್ದೇಸಕರು, ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು, (ಜಿಲ್ಲಾ ಬಾಲಕಾರ್ಮಿಕ ಯೋಜನೆ), ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಶಿವನಗರ (ಉ) ಬೀದರ ಕಾರ್ಯಾಲಯ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 12-03-2025 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…