ಬೀದರ್: ಇಂದು ಬೀದರ್ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
2025 ಕೋಟಿ ರೂ. ವೆಚ್ಚದ ಮೂಲಸೌಕರ್ಯ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸುಮಾರು 200 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಪೂರ್ಣಗೊಂಡಿರುವ 10 ಕಾಮಗಾರಿಗಳ ಲೋಕಾರ್ಪಣೆ ನಡೆಯಲಿದೆ.
ಬ್ರಿಮ್ಸ್ ಹೃದ್ರೋಗ ಘಟಕ & ಕ್ಯಾಥಲಾಬ್, ಭಾಲ್ಕಿ ಆರ್ಟಿಒ ಕಚೇರಿ ಸೇರಿ ಹಲವು ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. 48 ಕೋಟಿ ವೆಚ್ಚದ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿ, 15 ಕೋಟಿ ರೂ. ವೆಚ್ಚದ ವೆಚ್ಚದ ಭಾಲ್ಕಿ ತಾಲ್ಲೂಕ ಕ್ರೀಡಾಂಗಣ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನಡೆಸಲಾಗುತ್ತದೆ. ವಾಸ್ತವವಾಗಿ 2,400 ಕೋಟಿ ರೂ.ಗೂ ಅಧಿಕ ಮೌಲ್ಯದ ಕಾಮಗಾರಿಗಳ ಶಂಕುಸ್ಥಾಪನೆ & ಉದ್ಘಾಟನೆ ನೆರವೇರುತ್ತಿದೆ.
2025ರಲ್ಲಿ 2025 ಕೋಟಿ ರೂ. ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ರಹೀಂಖಾನ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಇರಲಿದ್ದಾರೆ.