ಬೀದರ.22.ಮಾರ್ಚ್.25:- ಕೆಲವು ದಿನ ಹಿಂದೆ ಬೆಳಗಾವಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿರ್ವಾಹಕನಿಗೆ ಮಸಿ ಬಳಿದು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ವಿವಿಧ ಕನ್ನಡಪರ್ ಸಂಘಟನೆಳ ಘಟಕದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಕನ್ನಡ ಬಾವುಟದೊಂದಿಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಹೆಜ್ಜೆ ಹಾಕುತ್ತ, ಜೈಘೋಷ ಹಾಕಿದರು. ಕ್ರಮಕ್ಕೆ ಒತ್ತಾಯಿಸಿದರು. ಆನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್ ಅವರಿಗೆ ಸಲ್ಲಿಸಿದರು.
ಕರ್ನಾಟಕ ಬಸ್ಗಳಿಗೆ ಕಪ್ಪು ಮಸಿ ಹಚ್ಚಿದವರು, ಬಸ್ ನಿರ್ವಾಹಕನೊಂದಿಗೆ ಅನುಚಿತವಾಗಿ ನಡೆದುಕೊಂಡವರ ಮೇಲೆ ಶೀಘ್ರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಪ್ರಶಾಂತ ಭಾವಿಕಟ್ಟಿ, ಉಪಾಧ್ಯಕ್ಷ ಅಮೃತ ಸಿಕೇನಪೂರ, ರಾಜಶೇಖರ ಹಲ್ಮಡಗೆ, ಕಾರ್ಯದರ್ಶಿ ಅಮರ ಕೋಟೆ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅರುಣಕುಮಾರ ಬಹಾದ್ದೂರ, ನಗರ ಘಟಕದ ಅಧ್ಯಕ್ಷ ಮುಹಮ್ಮದ್ ಮಜೀದ್, ಗೌರವ ಅಧ್ಯಕ್ಷ ಜಾಫೆಟ್ ಕಡ್ಯಾಳ, ನಗರ ಘಟಕದ ಉಪಾಧ್ಯಕ್ಷ ಮೋಹನ ಗುನ್ನಳ್ಳಿ, ಸಿದ್ದಾರ್ಥ ಕೋಟೆ, ಪುಟ್ಟರಾಜ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ, ಕರವೇ ಕಾವಲು ಪಡೆ ಜಿಲ್ಲಾಧ್ಯಕ್ಷ ಅವಿನಾಶ ಬುಧೇರಕರ್, ಕರವೇ ಸ್ವಾಭಿಮಾನಿ ಸೈನ್ಯ ಜಿಲ್ಲಾಧ್ಯಕ್ಷ ಸಂತೋಷ ಶೇರಿಕಾರ ಪಾಲ್ಗೊಂಡಿದ್ದರು.
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…
ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…
ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…
ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…
ಶಿವಮೊಗ್ಗ.14.ಜೂನ್.25:- ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…