ಬೀದರ.09.ಏಪ್ರಿಲ್.25:- ಬದಲಾದ ಸರಕಾರಿ ಕಛೇರಿ ಅವಧಿಯಂತೆ ಬೀದರ ಜಿಲ್ಲಾ ಪಂಚಾಯತಿಯ ಸಿಬ್ಬಂದಿಗಳು ಬೆಳಿಗ್ಗೆ 8.00 ಗಂಟೆಗೆ ಕಛೇರಿಯಲ್ಲಿ ಉಪಸ್ಥಿತರಿರುವ ಮೂಲಕ ತಮ್ಮ ಸಮಯ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆಯನ್ನು ಸಾಬೀತುಪಡಿಸುತ್ತಿರುವುದಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಶ್ಲಾಘಸಿದ್ದಾರೆ.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಈ ಭಾಗದ ಸರಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ಸರಕಾರವು ಸರಕಾರಿ ಕಛೇರಿಗಳ ಅವಧಿಯನ್ನು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿoದ ಮಧ್ಯಾಹ್ನ 1.30 ರವರೆಗೆ ಬದಲಾಯಿಸಿ ಆದೇಶಿಸಿರುತ್ತದೆ.
ಅದರನ್ವಯ ಜಿಲ್ಲಾ ಪಂಚಾಯತಿಯ ಅಧೀನದ ಎಲ್ಲಾ ಇಲಾಖೆಗಳು, ತಾಲೂಕಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳ ಅಧಿಕಾರಿಗಳು, ಸಿಬ್ಬಂದಿಯವರು ಜಿಲ್ಲಾ ಪಂಚಾಯತಿ ಕೇಂದ್ರ ಕಛೇರಿಯ ಸಿಬ್ಬಂದಿಯವರ ನಡೆಯನ್ನು ಅನುಕರಿಸಿ ಸಮಯಪಾಲನೆ ಮಾಡಿ ಕರ್ತವ್ಯ ಪ್ರಜ್ಞೆ ಪ್ರದರ್ಶಿಸುವಂತೆ ಅವರು ಸೂಚಿಸಿದ್ದಾರೆ.