ಬೀದರ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.22.ಜುಲೈ.25:- ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದರ ಜಿಲ್ಲೆಯನ್ನು “ಭಿಕ್ಷಾಟನೆ ಮುಕ್ತ” ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 9482300400, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ನಡೆಯುವ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ ಸಹಾಯವಾಣಿ 112ಗೆ ಅಥವಾ ಸಮೀಪದ ಪೊಲೀಸ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 


ಭಿಕ್ಷಾಟನೆಯನ್ನು ತಡೆಗಟ್ಟಲು ಸರ್ಕಾರವು ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ 1975ರ ಪ್ರಕಾರ ಮೂರು ತಿಂಗಳು ಕಠಿಣ ಕಾರಗೃಹವಾಸ ಹಾಗೂ ದಂಡವನ್ನು ವಿಧಿಸಲಾಗುವುದು. ಅದೇ ರೀತಿ ಮಕ್ಕಳನ್ನು ಭಿಕ್ಷಾಟನೆಗೆ ಬಳಸಿದ್ದಲ್ಲಿ ಬಾಲನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2015 ಮತ್ತು ತಿದ್ದುಪಡಿ ಕಾಯ್ದೆ 2021ರ 76ರ ಪ್ರಕಾರ 05 ವರ್ಷ ಕಾರಾಗೃಹ ವಾಸ ಮತ್ತು ರೂ. 1.00 ಲಕ್ಷದ ವರೆಗೆ ದಂಡವನ್ನು ವಿಧಿಸಲಾಗುವುದೆಂದರು. 


ಬೀದರ ಜಿಲ್ಲೆಯಲ್ಲಿ ವಿವಿಧ ತಾಲ್ಲೂಕು ಮತ್ತು ನಗರ ಪ್ರದೇಶಗಳ ವಿವಿಧ ಪ್ರಮುಖ ವೃತ್ತಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣ ಮತ್ತು ಜನ ಸಂದಣಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಅಧಿಕ ಸಂಖ್ಯೆಯಲ್ಲಿ ಭಿಕ್ಷೆ ಬೇಡುತ್ತ, ಸಾರ್ವಜನಿಕರಿಗೆ ಉಪದ್ರವ ನೀಡುತ್ತಿರುವುದು ಕಂಡು ಬಂದಿರುತ್ತದೆ. ಅದರಲ್ಲಿ ವಿಶೇಷವಾಗಿ ಮಹಿಳೆಯರು ಹಣ ಸಂಪಾದನೆಗಾಗಿ ಶಿಶುಗಳನ್ನು ತಮ್ಮ ಮಡಿಲಲ್ಲಿ ಹಾಕಿಕೊಂಡು ಭಿಕ್ಷೆ ಬೇಡುವುದು ನಾಗರೀಕ ಸಮಾಜಕ್ಕೆ ತಲೆ ತಗ್ಗಿಸುವಂತಾಗಿದೆ ಹಾಗೂ ಅಮಾನವೀಯ ವಿಷಯವಾಗಿದೆ.
ಭಿಕ್ಷಾಟನೆ ಒಂದು ಸಾಮಾಜಿಕ ಪಿಡುಗು. ಇದು ಬಡತನ, ನಿರುದ್ಯೋಗ, ಸಾಮಾಜಿಕ ಅಸಮಾನತೆಯಿಂದ ಉಂಟಾಗಿರುತ್ತದೆ. ಭಿಕ್ಷಾಟನೆಯು ವ್ಯಕ್ತಿಗಳ ಆತ್ಮ ಗೌರವವನ್ನು ಕುಗ್ಗಿಸುತ್ತದೆ. ಮತ್ತು ಸಮಾಜದ ಮೇಲೆ ನಕರಾತ್ಮಕ ಪರಿಣಾಮಗಳನ್ನು ಬೀರುತ್ತದೆ.

ಭಿಕ್ಷಾಟನೆಯನ್ನು ತಡೆಗಟ್ಟಲು ಮತ್ತು ನಿರ್ಮೂಲನೆ ಮಾಡಲು ಸಾಮೂಹಿಕ ಪ್ರಯತ್ನಗಳು ಮತ್ತು ಪರಿಹಾರ ಕ್ರಮಗಳು ಅಗತ್ಯವಾಗಿವೆ. ಹಾಗಾಗಿ ಜಿಲ್ಲೆಯಲ್ಲಿ ಭಿಕ್ಷಾಟನೆಯನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಪತ್ರ ಬರೆದು ಭಿಕ್ಷಾಟನೆಯನ್ನು ನಿರ್ಮೂಲನೆ ಮಾಡಲು ಕಾರ್ಯಪ್ರವೃತ್ತರಾಗುವಂತೆ ಸೂಚಿಸಲಾಗಿದೆ. ಅದೇ ರೀತಿ ಸಾರ್ವಜನಿಕರು ಸಹ ಭಿಕ್ಷಾಟನೆಯನ್ನು ಪ್ರೋತ್ಸಾಹಿಸದೇ ಇದನ್ನು ನಿರ್ಮೂಲನೆಯನ್ನು ಮಾಡಲು ಭಿಕ್ಷಾಟನೆಯನ್ನು ಬಹಿಷ್ಕರಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago