ಬೀದರ.11.ಫೆಬ್ರುವರಿ.25:- ಬೀದರ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವದೇಶ ದರ್ಶನ ಯೋಜನೆಯಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನವಿಗೆ ಸ್ಪಂದಿಸಿರುವ ಕೇಂದ್ರದ ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೀದರ ಪ್ರವಾಸೋದ್ಯಮಕ್ಕೆ ರೂ. 25 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಅನುದಾನ ಬಳಕೆಯಾಗಲಿದೆ. ಪ್ರಸ್ತುತ ಪ್ರವಾಸೋದ್ಯಮ ಇಲಾಖೆಯು ಕ್ರಿಯಾಯೋಜನೆ ತಯ್ಯಾರಿಸುತ್ತಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳ್ಳಲಿದೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಲಿವೆ.
ಈ ಅನುದಾನದ ನೆರವಿನಿಂದ ಬೀದರ್ನ ಪ್ರವಾಸಿ ತಾಣಗಳ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸಾಧ್ಯವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.