ಬೀದರ.07ಜನೆವರಿ.25 ಬೀದರ ನಗರ 09. ಜನೆವರಿ ಬಂದಗೆ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ಬಿಎಸ್ಪಿ ಬೆಂಬಲಸೂಚಿಸಿದೆ…’ಅಂಬೇಡ್ಕರ್ ಅಂಬೇಡ್ಕರ್ ಅನ್ನುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ.
ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳಲ್ಲಿ ಸ್ವರ್ಗ ದೊರೆಯುತ್ತಿತ್ತು ಎಂದು ರಾಜ್ಯಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕರೆ ಬೀದರ್ ಬಂದ್ಗೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಸಂಪೂರ್ಣ ಬೆಂಬಲ ಸೂಚಿಸಿದ್ದು, ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕಪೀಲ್ ಗೋಡಬೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದಾದ್ಯಂತ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ನಡೆಯುತ್ತಿದ್ದರೂ ಇಲ್ಲಿಯವರೆಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಅಮಿತ್ ಶಾ ರಾಜೀನಾಮೆಗೆ ಮುಂದಾಗುತ್ತಿಲ್ಲ.
ಈ ಬಂದ್ ನ್ನು ಬೆಂಬಲಿಸಿ ಹಲವಾರು,ವ್ಯಾಪಾರಿಗಳು, ಮಾರುಕಟ್ಟೆಯ ವರು, ತರಕಾರಿ ಸಂಘ, ಹೋಟೆಲ್ ಮಾಲೀಕರು, ಬಜಾರ್, ಕಿರಾಣಾ ಬಜಾರ್, ಬಟ್ಟೆ ಬಜಾರ್ ಹೀಗೆ ಹಲವಾರು ಸಂಘ ಸಂಸ್ಥೆಗಳು ಬೆಂಬಲಿಸಿ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಹೀಗಾಗಿ ಬೀದರ್ ಬಂದ್ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಲು ಜಿಲ್ಲೆಯ ಸಮಾಜ ಪರ ಚಿಂತಕರು, ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹೇಶ್ ಭೋಲಾ ಅವರು ಮನವಿ ಮಾಡಿದ್ದಾರೆ.
Source: www.prajaprabhat.com
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…