09/06/2025 9:15 AM

Translate Language

Home » ಲೈವ್ ನ್ಯೂಸ್ » ಬೀದರ ಬಂಧ ಇಲ್ಲೆಲ್ಲಾ ಶಾಲಾ-ಕಾಲೇಜುಗಳಿಗೆ ರಜೆ!

ಬೀದರ ಬಂಧ ಇಲ್ಲೆಲ್ಲಾ ಶಾಲಾ-ಕಾಲೇಜುಗಳಿಗೆ ರಜೆ!

Facebook
X
WhatsApp
Telegram

ಬೀದರ 08.ಜನವರಿ.25. ನಾಳೆ 09.ಜನವರಿ ಬೀದರ ಜಿಲ್ಲೆ ಬಂಧ. ಕೇಂದ್ರ ಗೃಹ ಸಚಿವ. ಅಮಿತ್‌ ಶಾ ಅವರು ಸಂಸತ್ತಿನಲ್ಲಿ ಬಾಬಾ ಸಾಹೇಬ ಡಾ// ಭೀಮರಾವ ಅಂಬೇಡ್ಕರ, ಅವರಿಗೆ ಅವಮಾನಿಸಿದ್ದಾರೆ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ  ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಇನ್ನು ಅಮಿತ್‌ ಶಾ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು, ಅವರ ರಾಜೀನಾಮೆ ಪಡೆದು, ಗಡಿಪಾರು  ಮಾಡಬೇಕು ಎಂದು ಆಗ್ರಹಿಸಿ ಅನೇಕ ದಲಿತ  ಹಾಗೂ ಪ್ರಗತಿಪರ ಸಂಘಟನೆಗಳು ಈಗಾಗಲೆ ಹಲವು ಕಡೆ ಬಂದ್‌ಗೆ ಕರೆಕೊಡ್ಲಾಗಿತು.

ಇದೀಗ ನಾಳೆ ವಿವಿಧ ದಲಿತಪರ ಸಂಘಟನೆ‌ಗಳ ಒಕ್ಕೂಟದಿಂದ ಇದೇ ವಿಷಯಕ್ಕೆ ಸಂಬಂಧಿಸಿ ಬೀದರ್‌ನಲ್ಲಿ ಬಂದ್‌ಗೆ ಕರೆ ನೀಡಲಾಗಿದೆ, ಬೀದರ್‌ನಲ್ಲಿ ನಾಳೆ (ಜ.9) ಅಮಿತ್‌ ಶಾ, ಬಿಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿದೆ.

ಬೀದರ್‌ನಲ್ಲಿ ನಾಳೆ ಗೃಹ ಸಚಿವ ಅಮಿತ್ ಶಾ ಅವರ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಹೇಳಿಕೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ ಬೀದರ್‌ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಬಂದ್‌ಗೆ ಕರೆ ನೀಡಿರುವ ಕಾರಣ ಬೀದರ್ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ.

ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!