ಬೀದರ ಮಹಾನಗರ ಪಾಲಿಕೆಗೆ ಬಿಎಸ್‌ಪಿ ಆಕ್ಷೇಪ.!

ಬೀದರ.12.ಫೆ.25 ಬೀದರ್‌ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಬಹುಜನ ಸಮಾಜ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

ಈ ಸಂಬಂಧ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಕಪೀಲ್ ಗೋಡಬೋಲೆ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಭೋಲಾ ಅವರು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರವು ತನ್ನ ಪಕ್ಷದ ಪ್ರಚಾರಕ್ಕಾಗಿ ಈ ನಿರ್ಧಾರ ಕೈಗೊಂಡಿದೆ. ಈಗಿರುವ ನಗರಸಭೆಯ 35 ವಾರ್ಡ್‌ಗಳಲ್ಲಿ ನಗರಸಭೆಯಿಂದ ಯಾವುದೇ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸಗಳು ಆಗಿಲ್ಲ.

ಬೀದರ್ ಜಿಲ್ಲಾ ಕೇಂದ್ರವಾಗಿದ್ದರೂ ಇದುವರೆಗೆ ಮಿನಿ ವಿಧಾನಸೌಧ ನಿರ್ಮಿಸಿಲ್ಲ. ಹಲವು ಬಡಾವಣೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಿಲ್ಲ. ಪಾದಚಾರಿ ಮಾರ್ಗಗಳಿಲ್ಲ. ಉದ್ಯಾನಗಳು ಅಭಿವೃದ್ಧಿ ಕಂಡಿಲ್ಲ. 24X7 ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತಿಳಿಸಿದ್ದಾರೆ.

ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮಾಡುವುದಾದರೆ ಮೊದಲು ತಳಮಟ್ಟದಿಂದ ನಗರಸಭೆಯ 35 ವಾರ್ಡ್‌ಗಳಲ್ಲಿ ಮೂಲ ಸೌಕರ್ಯ, ಜನರಿಗೆ ಸಿಗಬೇಕಾದ ಸಾಮಾನ್ಯ ಸೇವೆಗಳು ಹಾಗೂ ಜನಪರ ಕೆಲಸಗಳು ಸಂಪೂರ್ಣವಾಗಿ ಮಾಡಿ ಮುಗಿಸಬೇಕು. ಅಲ್ಲಿಯವರೆಗೆ ಮೇಲ್ದರ್ಜೆಗೇರಿಸುವುದು ಬೇಡ ಎಂದು ಆಗ್ರಹಿಸಿದ್ದಾರೆ.

ಬಿಎಸ್ಪಿ ವಿವಿಧ ಸಮಸ್ಯ ವಿರುದ್ದ ಅಗ್ರಹಸಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

3 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

4 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

4 hours ago