ಬೀದರ.25.ಮಾರ್ಚ.25: ಅರ್ಜುನಪ್ಪ ಪೊಲೀಸ್ ನಿರೀಕ್ಷಕರು-4 ಕರ್ನಾಟಕ ಲೋಕಾಯುಕ್ತ ಬೀದರ
(ಮೊಬೈಲ್ 9364062675) ಅವರು ಮಾರ್ಚ.27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಾಲ್ಕಿ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕು ಕೇಂದ್ರಗಳ ಸರ್ಕಾರಿ ಕಛೇರಿಯಲ್ಲಿ ಭ್ರಷ್ಟಚಾರ ಮತ್ತು ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಸಾರ್ವಜನಿಕರಿಗೆ ಸರ್ಕಾರಿ ಕಛೇರಿಗಳಲ್ಲಿ ಕೆಲಸಗಳನ್ನು ವಿಳಂಭ ಮಾಡುತ್ತಿದ್ದರೆ ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಛೇರಿಗೆ ಅಲೆದಾಡಿಸುತ್ತಿದ್ದರೆ ಅಲ್ಲದೆ, ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದರೆ ನಮ್ಮ ಗಮನಕ್ಕೆ ತರಬಹುದಾಗಿದೆ, ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ. ಎಮ್.ಐ.ಜಿ ನಂ 29 ಕೆ.ಎಚ್.ಬಿ ಕಾಲೋನಿ ಬೀದರ ದೂರುವಾಣಿ ಸಂಖ್ಯೆ : 9364062675, 08482-295445 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.