ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ  ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ವರದಿಮಾಡಿ ಕೊಂಡರು.!

ಬೀದರ.08.ಮಾರ್ಚ.25:-ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ ಕರ್ನಾಟಕ ಸರ್ಕಾರ ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ಆಗಮಿಸಿ ಇಂದು ವರದಿ ಮಾಡಿಕೊಂಡರು. ಅವರಲ್ಲಿ

1) ಶ್ರೀಶಿವನಾಥ ಪಾಟೀಲ್ ಮಾಧವರಾವ್ ಪಾಟೀಲ್ (ಸಾಮಾನ್ಯ),

2) ಶ್ರೀಸಚಿನ್ ಶಿವರಾಜ್                                     (ಸಾಮಾನ್ಯ),

3) ಶ್ರೀವಿಠಲ್‍ದಾಸ್ ಪ್ಯಾಗೆ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ),

4) ಶ್ರೀಅರ್ಜುನ್ ಮತೆಪ್ಪ ಕನಕ.                             (ಹಿಂದುಳಿದ ವರ್ಗ),

5) ಶ್ರೀಅಬ್ದುಲ್ ಸತ್ತಾರ್ ಚಾಂದ್ ಸಾಬ್.       (ಅಲ್ಪಸಂಖ್ಯಾತರು)

6) ಶ್ರೀಮತಿ ವೈಷ್ಣವಿ ಆರ್.ಪಾಟೀಲ್‍ರವರು

ಇಂದು ಸರ್ಕಾರ ನೀಡಿದ ತಮ್ಮ ಜವಾಬ್ದಾರಿಗೆ ವರದಿ ಮಾಡಿಕೊಂಡರು.


ಈ ಸಂದರ್ಭದಲ್ಲಿ ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಎಸ್.ಬಿರಾದಾರರವರು ಮಾತನಾಡುತ್ತಾ, ನೂತನ ಸಿಂಡಿಕೇಟ್ ಸದಸ್ಯರ ಆಗಮನದಿಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಶಕ್ತಿ ಬಂದಂತಾಗಿದೆ.

ವಿಶಾಲವಾದ 322 ಎಕರೆಯಲ್ಲಿ ವ್ಯಾಪಿಸಿರುವ ಬೀದರ ವಿಶ್ವವಿದ್ಯಾಲಯವು 124 ಕಾಲೇಜುಗಳ ಸಂಯೋಜನೆಯೊಂದಿಗೆ 14 ಸ್ನಾತಕೋತ್ತರ ಪದವಿ ಕೋರ್ಸುಗಳು ಹಾಗೂ 26000 ವಿದ್ಯಾರ್ಥಿಗಳು ಪ್ರವೇಶ ಪಡೆದಂತಹ ವಿಶ್ವವಿದ್ಯಾಲಯವಾಗಿದೆ.

ನೂತನ ವಿಶ್ವವಿದ್ಯಾಲಯವು ಅಭಿವೃದ್ದಿ ಹೊಂದಬೇಕಾದರೆ ಎಲ್ಲಾ ಸಿಂಡಿಕೇಟ್ ಸದಸ್ಯರ ಸಹಕಾರ ಮಾರ್ಗದರ್ಶನ ಅವಶ್ಯಕತೆಯಿದೆ. ಎಲ್ಲರ ಸಹಕಾರದೊಂದಿಗೆ ಮಾದರಿ ವಿಶ್ವವಿದ್ಯಾಲಯದೊಂದಿಗೆ ವಿಶ್ವವಿದ್ಯಾಲಯ ಕಟ್ಟೋಣವೆಂದರು.

ನೂತನ ವಿಶ್ವವಿದ್ಯಾಲಯವು ಈ ಭಾಗಕ್ಕೆ ವರದಾನವಾಗಿದೆ. ಈ ಭಾಗದ ವಿದ್ಯಾರ್ಥಿಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಕೈಜೋಡಿಸೋಣ, ಎಲ್ಲರೂ ಒಗ್ಗೂಡಿ ವಿಶ್ವವಿದ್ಯಾಲಯದ ಅಭಿವೃದ್ದಿಗಾಗಿ ಕಂಕಣಬದ್ದರಾಗೋಣವೆಂದರು.


  ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್ ರವರು ಎಲ್ಲರನ್ನು ಸ್ವಾಗತಿಸಿದರು, ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೋ.ಪರಮೇಶ್ವರ ನಾಯ್ಕ.ಟಿ ರವರು ಸರ್ವರನ್ನು ವಂದಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

8 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

11 hours ago