ಬೀದರ.01.ಮಾರ್ಚ.01: ಬೀದರ ವಿಶ್ವವಿದ್ಯಾಲಯ ಜ್ಞಾನಕಾರಂಜಿ ಹಾಲಹಳ್ಳಿಯ ಮುಖ್ಯ ಆವರಣದಲ್ಲಿ ಇಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಅವರು ಸ್ನಾತಕ ಬಿ.ಬಿ.ಎ., ಬಿ.ಸಿ.ಎ., ಹಾಗೂ ಬಿ.ಎಸ್ಸಿ ಎರಡನೆಯ ಸೆಮೆಸ್ಟರ್ ಪದವಿ ಫಲಿತಾಂಶವನ್ನು ಬಿಡುಗಡೆಗೊಳಿಸಿ ಮಾತನಾಡಿದ ಕುಲಪತಿಗಳು ಎಲ್ಲರ ಸಹಕಾರದೊಂದಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಬಂದಿದೆ. ನೂತನ ವಿಶ್ವವಿದ್ಯಾಲಯವಾಗಿದ್ದರೂ ಸಹ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ ಫಲಿತಾಂಶ ನೀಡುವಲ್ಲಿ ಬೀದರ ವಿಶ್ವವಿದ್ಯಾಲಯ ಯಶಸ್ವಿಯಾಗಿದೆ ಎಂದರು.
ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಬೀದರ ವಿಶ್ವವಿದ್ಯಾಲಯವು ಫಲಿತಾಂಶ ಪ್ರಕಟಿಸುತ್ತಿರುವುದು ಸಮಾಧಾನಕರ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಬೇರೆ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ ಬೀದರ ವಿಶ್ವವಿದ್ಯಾಲಯವು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಹಾಗಾಗಿ ಶ್ರಮವಹಿಸಿದ ಸಿಬ್ಬಂದಿಗಳೆಲ್ಲರೂ ಅಭಿನಂದನಾರ್ಹರು ಎಂದರು.
ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್.ಮಾತನಾಡಿ, ಸಮಯಕ್ಕೆ ಸರಿಯಾಗಿ ಫಲಿತಾಂಶ ಘೋಷಣೆಯಾದರೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಫಲಿತಾಂಶದ ಅವಶ್ಯಕತೆಯಿದೆ ಎಂದರು.
ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ ಮಾತನಾಡಿ, ಇದೊಂದು ಸಂತೋಷದ ಹಾಗೂ ಅಭಿಮಾನದ ಸಂಗತಿಯಾಗಿದೆ. ಇಂದು ಬೀದರ ವಿಶ್ವವಿದ್ಯಾಲಯದಲ್ಲಿ ಬಿ.ಬಿ.ಎ., ಬಿ.ಸಿ.ಎ., ಹಾಗೂ ಬಿ.ಎಸ್ಸಿ ಸ್ನಾತಕ ಪದವಿಯ ಫಲಿತಾಂಶವು ಬಿಡುಗಡೆಗೊಳಿಸಿ ಬೀದರ ವಿಶ್ವವಿದ್ಯಾಲಯವು ಮಾದರಿಯಾಗಿದೆ. ಪರೀಕ್ಷೆಗಳು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆದು ಕಡಿಮೆ ಅವಧಿಯಲ್ಲಿ ಫಲಿತಾಂಶ ಕೊಡುವುದು ಒಂದು ಸವಾಲಿನ ಕಾರ್ಯ. ಆದರೂ ಎಲ್ಲರ ಸಹಕಾರದೊಂದಿಗೆ ಇಂದು ಬಿ.ಬಿ.ಎ., ಬಿ.ಸಿ.ಎ., ಹಾಗೂ ಬಿ.ಎಸ್ಸಿ ಫಲಿತಾಂಶ ಹೊರಬಂದಿದ್ದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಬೀದರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಧ್ಯಾಪಕರಾದ ಡಾ.ಚೆನ್ನಕೇಶವಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.