ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ!


ಬೀದರ, 26ಡಿ24:ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ವಿಷಯಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಉಳಿದಿರುವ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿಗಳ ಹಾಗೂ ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿಗಳ ಉಳಿದ ಸೀಟುಗಳಿಗೆ ಅಂತಿಮವಾಗಿ ಅರ್ಜಿ ಕರೆಯಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನ್‍ಲೈನ್‍ನಲ್ಲಿ ಡಿಸೆಂಬರ್.26 ರಿಂದ ಅರ್ಜಿ ಸಲ್ಲಿಸಿ ಡಿಸೆಂಬರ್.31 ರವರೆಗೆ ಭರ್ತಿ ಮಾಡಿ ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಅಥವಾ ಸಂಯೋಜಿತ ಕಾಲೇಜುಗಳಲ್ಲಿ ಸಲ್ಲಿಸಬೇಕು. ಪ್ರವೇಶ ಪಡೆಯುವ ದಿನಾಂಕ ಮೆರಿಟ್ ಆಧಾರಿತ 01-01-2025 ಮತ್ತು 02-01-2025 ಆಗಿರುತ್ತದೆ. ವಿಶ್ವವಿದ್ಯಾಲಯ ಆವರಣದಲ್ಲಿ ಕಲಾ ವಿಷಯಗಳಾದ ಕನ್ನಡ, ಇಂಗ್ಲೀಷ, ಉರ್ದು, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಸಮಾಜಕಾರ್ಯ ಹಾಗು ಮಹಿಳಾ ಅಧ್ಯಯನ ವಿಭಾಗಗಳಲ್ಲಿ ಸೀಟು ಲಭ್ಯತೆ ಇರುತ್ತದೆ. ವಿಜ್ಞಾನ ವಿಭಾಗದಲ್ಲಿ ಗಣಿತಶಾಸ್ತ್ರ, ಕಂಪ್ಯೂಟರ್ ವಿಜ್ಞಾನ ಹಾಗೂ ಭೌತಶಾಸ್ತ್ರ ಲಭ್ಯತೆ ಇರುತ್ತದೆ. ಸಂಯೋಜಿತ ಕಾಲೇಜುಗಳಲ್ಲಿಯೂ ಸೀಟು ಲಭ್ಯತೆ ಇದ್ದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ. ಪ್ರವೇಶಾತಿ ಸೌಲಭ್ಯ ಪಡೆಯಲು ಸೂಚಿಸಿದೆ. ಖಾಲಿ ಉಳಿದುರವ ಸೀಟುಗಳ ವಿವರ ಹಾಗೂ ಅರ್ಜಿ ಶುಲ್ಕದ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್  https://bidaruniversity.ac.in   ದಲ್ಲಿ ಪಡೆಯುಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಯುಯುಸಿಎಂಎಸ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago