ಬೀದರ.16.ಫೆ.25: ಇಂದು ಬೀದರ ವಿಶ್ವವಿದ್ಯಾಲಯ ದಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಶನಿವಾರ ಆಚರಿಸಲಾಯಿತು.
ವಿಶ್ವವಿದ್ಯಾಲಯದಲ್ಲಿ ನಡೆದ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ವಿ.ವಿ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯಕ ಮಾತನಾಡಿ, ‘ಸಂತ ಸೇವಾಲಾಲ್ ಅವರು ಬುಡಕಟ್ಟು ಸಮುದಾಯದಲ್ಲಿನ ಸಮಸ್ಯೆಗಳನ್ನು ಅರಿತು, ಎಲ್ಲರೂ ಕಲಿಯಿರಿ ಮತ್ತು ಎಲ್ಲರನ್ನೂ ಕಲಿಸಿರಿ ಎಂಬ ಮಹತ್ವದ ಸಂದೇಶವನ್ನು ಸಾರಿದರು’ ಎಂದರು.
ಹಿಂದುಳಿದ ಬಂಜಾರ ಸಮುದಾಯದಲ್ಲಿ ಜನಿಸಿದ ಸೇವಾಲಾಲರು ತಮ್ಮ ಆದರ್ಶ ಜೀವನಶೈಲಿಯಿಂದಾಗಿ ಜನಮಾನಸದಲ್ಲಿ ಇಂದಿಗೂ ವಿರಾಜಮಾನರಾಗಿದ್ದಾರೆ. ಸೇವಾಲಾಲರು ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಕರ್ತವ್ಯ, ಹಕ್ಕುಗಳು, ಧರ್ಮ, ಕ್ರಿಯೆಗಳ ಬಗ್ಗೆ ವಿವರವಾಗಿ ಬೋಧಿಸಿದ್ದಾರೆ. ಅವರು ಸ್ತ್ರೀ-ಪುರುಷರಲ್ಲಿ ಸಮಾನತೆ ಇರಬೇಕೆಂದು ಹೇಳಿದ್ದರು’ ಎಂದು ನೆನೆದರು.
ಕುಲಸಚಿವೆ (ಆಡಳಿತ) ಸುರೇಖಾ ಮಾತನಾಡಿ, ‘ಸಂತ ಸೇವಾಲಾಲರ ಆಧ್ಯಾತ್ಮಿಕ ಅನುಭವದ ಜೊತೆಗೆ ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ, ಶ್ರಮಜೀವಿಗಳು, ತುಳಿತಕ್ಕೊಳಗಾದವರ ಧ್ವನಿಯಾಗಿ ಅವರ ಸಂದೇಶಗಳು ಮೂಡಿಬಂದಿವೆ. ಅವರು ಸಮಾಜವನ್ನು ಸನ್ಮಾರ್ಗದೆಡೆಗೆ ಕೊಂಡೊಯ್ಯುವ ಆದರ್ಶ ಮಾರ್ಗದರ್ಶಕರಾಗಿದ್ದರು’ ಎಂದರು.
ವಿಶೇಷ ಅಧಿಕಾರಿ ರವೀಂದ್ರನಾಥ ವಿ.ಗಬಾಡಿ, ಶಾಂತಕುಮಾರ ಚಿದ್ರಿ ಮತ್ತಿತರರು ಹಾಜರಿದ್ದರು.
ಜಿಲ್ಲಾ ಬಿಜೆಪಿ: ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ ಪೂಜೆ ನೆರವೇರಿಸಿದರು. ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ರಾಜಶೇಖರ ನಾಗಮೂರ್ತಿ, ಅರುಣ, ಆದಿನಾಥ್, ಶಿವರಾಜ ಹಾಜರಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…