ಬೀದರ, ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ


ಬೀದರ.27.ಜನವರಿ.25:- ಬೀದರ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕೂಡಲೇ ಈ ಪ್ರಕಟಣೆಯಾದ 03 ದಿನಗಳ ಒಳಗಾಗಿ ಮಾಹಿತಿ ಸಲ್ಲಿಸಬೇಕು.

ಇಲ್ಲವಾದಲ್ಲಿ ನೀವು ತಿಳಿಸಬೇಕಾಗಿರುವುದು ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ಸಂಘದ ಲೆಕ್ಕಪರಿಶೋಧನೆ ನಿರ್ವಹಿಸಲು ಇಲಾಖಾ ವತಿಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಬೀದರ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾವು ಪ್ರತಿವರ್ಷದಂತೆ ಈ ವರ್ಷವು ದಿನಾಂಕ: 25-09-2024 ರೊಳಗಾಗಿ ಪ್ರತಿಯೊಂದು ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಜರುಗಿಸಬೇಕು.

ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನುಆಯ್ಕೆ ಮಾಡಿಕೊಳ್ಳಬೇಕು.

ತಾವು ಜರುಗಿಸಿದ ವಾರ್ಷಿಕ ಮಹಾಸಭೆಯ ನಡುವಳಿಗಳನ್ನು ಕರ್ನಾಟಕ ಸಹಕಾರ ಸಂಘಗಳ / ಸೌಹಾರ್ದ ಸಹಕಾರಿಗಳ ನಿಯಮಗಳ ನಿಯಮ  29(B)8 / 8(B)8  ರಿತ್ಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡ ಬಗ್ಗೆ 07 ದಿನಗಳ ಒಳಗಾಗಿ ವಾರ್ಷಿಕ ಮಹಾಸಭೆಯ ನಡುವಳಿಯೊಂದಿಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಕಛೇರಿಗೆ ಮಾಹಿತಿಗಾಗಿ ಸಲ್ಲಿಸಬೇಕಾಗಿದ್ದು, ತಹಲ್‍ವರಗೂ ಲೆಕ್ಕಪರಿಶೋಧಕರ ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ.


ಆದ್ದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ/ಸೌಹಾರ್ದ ಸಹಕಾರಿ ಕಾಯ್ದೆ ಕಲಂ 63(1)/33(1) ರನ್ವಯಆಯ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗಿತ್ತು.

ಆದರೆ ಆಯ್ಕೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ / ಸೌಹಾರ್ದ ಸಹಕಾರಿಕಾಯ್ದೆ ಕಲಂ 63(2) / 33(2) ಪ್ರಾವಿಸೊದನ್ವಯ ಪ್ರದತ್ತವಾದ ಅಧಿಕಾರದ ಮೆರೆಗೆ ನೀವು ಲೆಕ್ಕ ಪರಿಶೋಧನೆಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಳ್ಳದೆ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ನಿಯಮ / ಸೌಹಾರ್ದ ಸಹಕಾರಿ ನಿಯಮ  29(B)8 / 8(B)8  ರನ್ವಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ.

ಈ ಇಲಾಖೆಗೆ ತಿಳಿಯಪಡಿಸದೇ ಇರುವುದರಿಂದ ತಾವು ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆಂದು ಪರಿಭಾವಿಸಿ ಇಲಾಖಾ ವತಿಯಿಂದ ತಮ್ಮ ಸಂಘಗಳ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸುತ್ತಾ ಈ ಕುರಿತು ನಿಮ್ಮ ಹೇಳಿಕೆ/ಮಾಹಿತಿ ಏನಾದರೂ ಇದ್ದಲ್ಲಿ ಕೆಳಗೆ ಇರುವ ಅಡ್ರೆಸ್ಗೆ

ಮಾನ್ಯ ಉಪ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಉಪ ನಿರ್ದೇಶಕರಕಛೇರಿ, ಬೀದರ ಎಲ್.ಐ.ಜಿ-124 ಕೆ.ಎಚ್.ಬಿ. ಕಾಲೋನಿ, ವಿಶ್ವನಾಥ ಫುಲೇಕರ್‍ರವರ ನಿವಾಸ, ಡಾ|| ನಾಗಮಾರಪಳ್ಳಿ ರವರ ಮನೆ ಹತ್ತಿರ, ಬೀದರ-585401 ರವರಿಗೆ ಮಾಹಿತಿ ಸಲ್ಲಿಸಲು ತಿಳಿಯಪಡಿಸಿದೆ ಅವರು ತಿಳಿಸಿದ್ದಾರೆ.

ಈ ಮೇಲಿನ ಯೆಲ್ಲ ಮಾಹಿತಿ ಸಹಕಾರ ಸಂಘ ನೀಡಿದ್ದಾರೆ ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನುಆಯ್ಕೆ ಮಾಡಿಕೊಳ್ಳಬೇಕು…

Source: www.prajaprabhat.com

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

2 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

11 hours ago