ಬೆಂಗಳೂರಿನ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆ; ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರು.16.ಮೇ.25:- ನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆಗಳು ಖಾಲಿ ಇದ್ದು, ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಯುಷ್ಮಾನ್ ಭಾರತ್ ಇನ್ ಫ್ರಾಸ್ಟ್ರಕ್ಚರ್ ಮಿಷನ್ ಯೋಜನೆ ಅಡಿಯಲ್ಲಿ ನಮ್ಮ ಕ್ಲಿನಿಕ್ ಗಳನ್ನು ನಡೆಸಲಾಗುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ, ಸರ್ಜಾಪುರ, ದೊಮ್ಮಸಂದ್ರ, ಆನೇಕಲ್, ಹುಣಸಮಾರನಹಳ್ಳಿ, ಮಾದನಾಯಕನಹಳ್ಳಿ, ಚಿಕ್ಕಬಾಣಾವರ ಸೇರಿ ಹಲವೆಡೆ ಕಾರ್ಯನಿರ್ವಹಿಸುವವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಮೇ 19ರಂದು ಸಂದರ್ಶನ ನಡೆಯಲಿದೆ.

19 ವೈದ್ಯಾಧಿಕಾರಿಗಳು, 16 ಶುಶ್ರೂಷಣಾಧಿಕಾರಿಗಳು ಹಾಗೂ 13 ಪ್ರಯೋಗಶಾಲೆ ತಂತ್ರಜ್ಞರ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಮಾಸಿಕ 60 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಇನ್ನು, ಶುಶ್ರೂಷಣಾಧಿಕಾರಿಗಳಿಗೆ 18,714 ರೂ. ಹಾಗೂ ಪ್ರಯೋಗಶಾಲೆ ತಂತ್ರಜ್ಞರಿಗೆ 16,515 ರೂ. ಸಂಬಳ ನೀಡಲಾಗುತ್ತದೆ.

ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಬಿಬಿಎಸ್ ಪಾಸಾಗಿರಬೇಕು. ಕಡ್ಡಾಯವಾಗಿ ಇಂಟರ್ನ್ ಶಿಪ್ ಪೂರೈಸಿ ಕೆಎಂಸಿ ನೋಂದಣಿ ಹೊಂದಿರಬೇಕು. ಶುಶ್ರೂಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿಎಸ್ಸಿ, ಜಿಎನ್‌ಎಂ ತರಬೇತಿ ಹಾಗೂ ಕೆಎಂಸಿ ನೋಂದಣಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಇರುವುದು ಕಡ್ಡಾಯವಾಗಿದೆ.

ಹುದ್ದೆ : ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ವೈದ್ಯಾಧಿಕಾರಿಗಳು 19
ಶುಶ್ರೂಷಣಾಧಿಕಾರಿಗಳು 16
ಪ್ರಯೋಗಶಾಲಾ ತಂತ್ರಜ್ಞರು 13
ಶೈಕ್ಷಣಿಕ ಅರ್ಹತೆ :
• ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿ ಕಡ್ಡಾಯವಾಗಿ ಇಂಟರ್ನಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿ ಹೊಂದಿರತಕ್ಕದ್ದು.

• ಶುಶ್ರೂಷಣಾಧಿಕಾರಿಗಳು – ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಬಿ.ಎಸ್.ಸಿ/ ಜಿ.ಎನ್.ಎಂ ತರಬೇತಿ ಹಾಗೂ ಕೆ.ಎನ್.ಸಿ ನೋಂದಣಿ ಹೊಂದಿ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

• ಪ್ರಯೋಗಶಾಲಾ ತಂತ್ರಜ್ಞರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಕೋರ್ಸ್ ನಲ್ಲಿ ಉತ್ತೀರ್ಣ ಹೊಂದಿರಬೇಕು.

ವಯೋಮಾನ : ವೈದ್ಯಾಧಿಕಾರಿಗಳು ಹುದ್ದೆ ಹೊರತುಪಡಿಸಿ ಉಳಿದ ಹುದ್ದೆಗಳಿಗೆ ಈ ಕೆಳಗಿನಂತೆ ವಯೋಮಾನ ನಿಗದಿಪಡಿಸಲಾಗಿದೆ.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ವೈದ್ಯಾಧಿಕಾರಿಗಳು – ಗರಿಷ್ಠ 60 ವರ್ಷ

ವೇತನ :

ವೈದ್ಯಾಧಿಕಾರಿಗಳು 60,000
ಶುಶ್ರೂಷಣಾಧಿಕಾರಿಗಳು 18,714
ಪ್ರಯೋಗಶಾಲಾ ತಂತ್ರಜ್ಞರು 16,515
ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ನೇರ ಸಂದರ್ಶನದ ಮೂಲಕ

ಸಂದರ್ಶನ ಸ್ಥಳ : ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣ, ಹಳೇ ಟಿ.ಬಿ ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೇಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು – 38

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಮೇ 19, 2025 ಬೆಳಿಗ್ಗೆ 11.00 ಗಂಟೆಗೆ

ಪ್ರಯೋಗಶಾಲೆ ತಂತ್ರಜ್ಞರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಕೋರ್ಸ್ ಮುಗಿಸಿರಬೇಕು. ಅಲ್ಲದೆ, ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿ ನಡೆಸುವ ಪ್ರಯೋಗಶಾಲೆ ತಂತ್ರಜ್ಞತೆಯಲ್ಲಿ ಮೂರು ವರ್ಷದ ಕೋರ್ಸ್ ಮುಗಿಸಿರಬೇಕು. ಪ್ರಯೋಗಶಾಲೆ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರಬೇಕು.

ಮೇ 19ರಂದು ಸಂದರ್ಶನ ನಡೆಯಲಿದೆ. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೇ ಟಿ.ಬಿ ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕನಂದ ಮೆಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು – 38ಗೆ ಹಾಜರಾಗಿ ಸಂದರ್ಶನ ನೀಡಬಹುದು. ಸಂದರ್ಶನಕ್ಕೆ ಹಾಜರಾಗುವವರು ಮೂಲ ದಾಖಲೆಗಳನ್ನು ಜೆರಾಕ್ಸ್ ಪ್ರತಿಯೊಂದಿಗೆ ತರುವುದು ಕಡ್ಡಾಯ ಎಂದು ತಿಳಿಸಲಾಗಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

1 hour ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

1 hour ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

4 hours ago