ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಈ ಬಾರಿ ವಾಡಿಕೆಗಿಂತಲೂ ಉತ್ತಮ ಮಳೆಯಾಗಿರುವ ಕಾರಣ ಸೋಯಾಬಿನ್ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನಲ್ಲಿ 102500 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಮಂಜೂರಾಗಿದ್ದು, ಈಗಾಗಲೇ 87500 ಕ್ವಿಂಟಾಲ್ ವಿತರಣೆ ಮಾಡಲಾಗಿದೆ. 15000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಬೀದರ್ ಗೆ ರವಾನೆ ಆಗಿದ್ದು 2-3 ದಿನಗಳಲ್ಲಿ ರೈತರಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜಿಲ್ಲೆಯಲ್ಲಿ 112000 ಕ್ವಿಂಟಾಲ್ ಸೋಯಾಬಿನ್ ಬಿತ್ತನೆ ಬೀಜಗಳ ವಿತರಣೆ ಮಾಡಲಾಗಿತ್ತು. ಈ ಬಾರಿ ಉತ್ತಮ ಪೂರ್ವ ಮುಂಗಾರು ಮಳೆಯಿಂದ ಬೇಡಿಕೆ ಹೆಚ್ಚಾಗಿದೆ.
ಹೀಗಾಗಿ ನಿನ್ನೆ ಯಾದಗಿರಿಯಲ್ಲಿ ನಡೆದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಈ ಸಂಬoಧ ಮನವಿ ಸಲ್ಲಿಸಿದ್ದು, 15000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜವನ್ನು ಮಾರುಕಟ್ಟೆಯಲ್ಲಿ ಖರೀದಿಸಿ ಹಚ್ಚುವರಿಯಾಗಿ ವಿತರಿಸಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೀಘ್ರವೇ ಹೆಚ್ಚುವರಿ ಬಿತ್ತನೆ ಬೀಜವೂ ಬೀದರ್ ಗೆ ಆಗಮಿಸಲಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲಾಗುವುದು. ಯಾರೂ ಆತಂಕ ಪಡುವುದು ಬೇಡ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…
ಗುಜರಾತ್ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…