ಔರಾದ.30.ಮೇ.25:- ಹೈಟೆಕ್ಮಾದರಿ ಮಾದರಿ ಶಾಲೆ ಎಲ್ಲಿ ಅಂದರೆ ಔರಾದ್ ಎತ್ತ ನೋಡಿದರತ್ತ ವಿದ್ಯಾರ್ಥಿಗಳ ಮನ ಸೆಳೆಯುವ ಬಣ್ಣ ಬಣ್ಣದ ಚಿತ್ತಾರ, ಕುಡಿಯಲುಶುದ್ಧ ನೀರಿನ ಘಟಕ, ವಿದ್ಯಾರ್ಥಿಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ವ್ಯತ್ಯಯವಾದರೆ ಇನ್ವರ್ಟರ್ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಏಕಲಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರಳಗ್ರಾಮದಲ್ಲಿ ನಿರ್ಮಾಣಗೊಂಡಿದೆ.
ಈ ಹಿಂದಿನ ಶಾಲೆ ಶಿಥಿಲಗೊಂಡಿದ್ದರಿಂದ ಗ್ರಾಮದ ಸರ್ಕಾರಿ ಜಾಗದಲ್ಲಿ ಕಲ್ಯಾಣಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ 80 ಲಕ್ಷ ಅನುಧಾನದಲ್ಲಿ ಈ ಶಾಲೆ ನಿರ್ಮಾಣ ಮಾಡಲಾಗಿದೆ. ಈ ಶಾಲೆಯು 5 ಕೋಣೆಗಳನ್ನು ಹೊಂದಿದೆ. ನರೇಗಾ ಯೋಜನೆಯಡಿಶಾಲೆಗೆ ಕಂಪೌಂಡ್ ನಿರ್ಮಿಸಲಾಗಿ ದ್ದು, ಹಳೆವಿದ್ಯಾರ್ಥಿಗಳ ಹಾಗೂ ಸಂಘ-ಸಂಸ್ಥೆಗಳ ಸಹಕಾರದಿಂದ ಗೋಡೆಗಳ ಮೇಲೆ ವಿವಿಧಸಂದೇಶ ಸಾರುವ ಚಿತ್ರಗಳನ್ನು ಬಿಡಿಸಲಾಗಿದೆ.
-ಮಾಣಿಕರಾವ ಪಾಟೀಲ್ . ಔರಾದ್ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ
ಹಿಂದಿನ ಶಾಲೆಯ ಶಿಥಿಲವಾಗಿದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಆದರೆ ಈಗ ಎಲ್ಲರ ಸಹಕಾರ ಹಾಗೂ ಸಹಾಯ ಹಸ್ತದಿಂದ ಹೊಸ ಶಾಲೆ ನಿರ್ಮಾಣಗೊಂಡಿದ್ದು ಸಂತಸ ತಂದಿದೆ. -ಸತೀಶ್ ಮಜಗೆ ಶಿಕ್ಷಕ ಬೋರಳ್
ಎಲ್ಲರೂ ಕಾಳಜಿ ವಹಿಸಿ ಕೆಲಸ ಮಾಡಿದ್ದರಿಂದ ಈ ಶಾಲೆ ನಿರ್ಮಾಣವಾಗಿ ದೆ. ಮಕ್ಕಳು ಇದರ ಲಾಭ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ಶಾಲೆ ನಿರ್ಮಾಣದಿಂದ ಸರ್ಕಾರಿ ಜಾಗ ಒತ್ತುವರಿಯನ್ನು ತಡೆದಂತಾಗಿದೆ. -ವಿಜಯಲಕ್ಷ್ಮಿ ಏಕಲಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಆಧಿಕಾರಿ
ಎಲ್ಲರ ಸಹಕಾರದಿಂದ ಈ ಮಾದರಿ ಶಾಲೆಯನ್ನು ನಿರ್ಮಾಣ ಮಾಡಲಾಗಿ ದೆ. ಮುಂದಿನ ದಿನಗಳಲ್ಲಿ ಮಳೆ ನೀರಿನ ಕೊಯ್ದು ಹಾಗೂ ಆಟದ ಮೈದಾನ ನಿರ್ಮಾಣ ಮಾಡಲಾಗುವುದು. ಪ್ರಸಕ್ತ ಸಾಲಿನಿಂದಲೇ ಈ ಶಾಲೆ ಆರಂಭವಾಗಲಿದ್ದು ಹೊಸ ಕಟ್ಟ ಡದಿಂದ ಮಕ್ಕಳ ಮುಖದಲ್ಲಿ ಮಂದಹಾಸ ಬೀರಿದೆ……. ಡಾ. ದಿಲೀಪ್ ಬದ್ಗೊಲ್ ಜಿಲ್ಲಾ ಪಂಚಾಯತ್. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…