ಬೀದರ.23.ಜನವರಿ.25:- ಪೌರಾಡಳಿತ ಹಾಗೂ ಹಜ್ ಸಚಿವಾರದ ರಹಿಂ ಖಾನ್ ಅವರು ಜನವರಿ.16 ರಂದು ಬೀದರ್ನಲ್ಲಿ ಎಸ್ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ ಶಿವಕುಮಾರ್ ಅವರನ್ನು ಹೈದರಾಬಾದ್ನ ಕೇರ್ ಆಸ್ಪತ್ರೆಯಲ್ಲಿ ಭೇಟಿಯಾದರು.
ಅವರು ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೈದರಾಬಾದ್ಗೆ ಆಗಮಿಸಿದ ಅವರು ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಮತ್ತು ಆರ್ಥಿಕ ಸಹಾಯವನ್ನು ನೀಡಿದರು. ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಭರವಸೆ ನೀಡಿದ ಅವರು, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ ವಿನಂತಿಸಿದರು ಮತ್ತು ಅವರ ಆರೋಗ್ಯದ ಬಗ್ಗೆ ವಿವರವಾಗಿ ವಿಚಾರಿಸಿದರು.
ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು.
ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಅಪರಿಚಿತ ನಂಬರಗಳಿoದ ದೂರವಾಣಿ ಕರೆಗಳು ಬಂದಲ್ಲಿ
ಸ್ವೀಕರಿಸಬಾರದೆಂದು ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರಲ್ಲಿ ಮನವಿ