ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ


ಬೀದರ,06 ಡಿಸೆಂಬರ್24 :- ಭವ್ಯ ಭಾರತದಲ್ಲಿ ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಭಾವೈಕ್ಯತೆ ಭ್ರಾತೃತ್ವ ನೀಡಿ ಅಸ್ಪೃಶ್ಯತೆ ನಿವಾರಣೆಗೆ ಪರಿಶ್ರಮ ಪಟ್ಟ ಅಂಬೇಡ್ಕರ್ ಅವರು ಮಹಾಮಾನವತಾವಾದಿ ಹಾಗೂ ಭವ್ಯ ಭಾರತದ ಅಭಿವೃದ್ಧಿಯ ಜನಕರಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.


ಅವರು ಇಂದು ನಗರದ ಅಂಬೇಡ್ಕರ್ ವೃತದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಪಂಚಶೀಲ ಧ್ವಜಾರೋಹಣ ನೆರೆವೆರಿಸಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ಭಾರತೀಯರಾದ ಪ್ರತಿಯೊಬ್ಬರೂ ಡಾ.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಪ್ರೀತಿ, ವಿಶ್ವಾಸ ಭಾವೈಕ್ಯತೆ ಮತ್ತು ಶಾಂತಿ ಕಾಪಾಡಿಕೊಂಡು ಅಂಬೇಡ್ಕರ್ ರವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದು ತಿಳಿಸಿದರು
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ಭಾರತದ ಪ್ರತಿಯೊಬ್ಬ ನಾಗರಿಕರನ್ನು ಅಂಬೇಡ್ಕರ್ ರವರ ಋಣದಲ್ಲಿ ಜೀವನ ಸಾಗಿಸುತ್ತಿದ್ದಾನೆ. ಅಂಬೇಡ್ಕರ್ ಅವರು ಜ್ಞಾನದ ಶಿಖರವಾಗಿದ್ದಾರೆ ಎಂದರು.


ಮಾಜಿ ಸಚಿವ ಬಂಡೆಪ್ಪಾ ಖಾಶೆಂಪೂರ ಮಾತನಾಡಿ, ಪ್ರಜಾಪ್ರಭುತ್ವದ ರೂವಾರಿ ಬಾಬಾಸಾಹೇಬ್ ಅಂಬೇಡ್ಕರ್ ಅವರಾಗಿದ್ದಾರೆ. ಅವರು ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದರು
ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ಅಂಬೇಡ್ಕರ್ ಸಾಹೇಬರು ನೀಡಿದ ಮೀಸಲಾತಿಯ ಭಿಕ್ಷೆಯಿಂದ ನಾನು ನಗರ ಸಭೆಯ ಅಧ್ಯಕ್ಷನಾಗಲು ಸಾಧ್ಯವಾಗಿದೆ ಎಂದರು
ಇದೇ ಸಂದರ್ಭದಲ್ಲಿ ಪೂಜ್ಯ ಭಂತೆ ಜ್ಞಾನ ಸಾಗರ ಹಾಗೂ ಭಿಕ್ಕು ಸಂಘ ತ್ರೀಶರಣ ಪಂಚಶೀಲ ನಡೆಸಿಕೊಟ್ಟರು. ಎಲ್ಲಾ ಗಣ್ಯರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿಯ ಅಧ್ಯಕ್ಷ ಮಾರುತಿ ಬೌಧ್ದೆ, ಗೌರವಾಧ್ಯಕ್ಷ ವಿಷ್ಣುವರ್ಧನ್ ವಾಲ್ದೋಡ್ಡಿ, ಕಾರ್ಯಾಧ್ಯಕ್ಷ ಪವನ ಮಿಠಾರೆ, ಪ್ರಧಾನ ಕಾರ್ಯದರ್ಶಿ ಮಹೇಶ ಗೋರನಾಳಕರ್, ಕಾರ್ಯದರ್ಶಿ ರಾಹುಲ್ ಡಾಂಗೆ ಖಜಾಂಚಿ ವಿನೋದ ಬಂದಗೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೆಚ್. ಎಸ್ .ಸಿಂಧೂ ಡಾ.ಬಿ.ಆರ್.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರೇಮಸಾಗರ ದಾಂಡೆಕರ್, ನಗರ ಸಭೆ ಪೌರಾಯುಕ್ತ ಶಿವರಾಜ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸುಭಾಷ ನಾಗೂರೆ, ಪ್ರಮುಖರಾದ ರಾಜಕುಮಾರ ಮೂಲಭಾರತಿ, ಬಸವರಾಜ ಮೇತ್ರೆ, ಪ್ರಶಾಂತ ದೋಡ್ಡಿ, ಸಂಗು ಚಿದ್ರಿ ಸುನೀಲ್ ಡೊಳೆ, ಸುರೇಶ ಶಿಂದೆ, ಸುಮಂತ ಕಟ್ಟಿಮನಿ, ಅರುಣ ಪಟೇಲ್, ಓಂಪ್ರಕಾಶ್ ರೋಟ್ಟೆ, ಬಸವರಾಜ ಪವಾರ, ರಾಜಕುಮಾರ ಕಾಂಬಳೆ, ಅಭಿ ಕಾಳೆ, ಪ್ರದೀಪ್ ಜಂಜಿರೆ, ಮುಕೇಶ್ ರಾಯ್ ಬಾಬುರಾವ ಮಿಠಾರೆ,ರಾಹುಲ್ ಹಾಲೆಪೂರ್ಗಿಕರ್, ಶ್ರೀಮಂತ ಜೋಷಿ, ರವಿ ಭೂಸಂಡೆ, ವಿನೊದ ಗುಪ್ತಾ, ವಿನಿತ ಗಿರಿ, ಅಜಯ ದೀನೆ ಪಪ್ಪು ಹಾರೂರಗೇರಿ, ಕರಣ ಜಡಗೆ, ದೀಪಕ್ ದಿಲ್ಲೆ, ಸೋನು ವಾಲ್ದೋಡ್ಡಿ, ಜಗದೀಶ್ ಬಿರಾದರ, ಉದಯ ನಾಯಕ, ಅಮೃತ ಮುತಂಗಿಕರ್, ಸಂತೋಷ ಏಣಕೂರೆ, ಡಾ.ಮದನಾ ವೈಜಿನಾಥ, ಸುಧ್ದಾಮಣಿ ಗುಪ್ತಾ, ಬೌಧ್ದ ಉಪಾಸಕ ಉಪಾಸಕಿಯರು ವಿವಿಧ ಸಮಾಜ ಗಣ್ಯರು , ಹೋರಾಟಗಾರು ಸಂಘಟನೆಗಳ ಮುಖ್ಯಸ್ಥರು ಅಧಿಕಾರಿ ವರ್ಗದವರು ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

source: www.prajaprabhat.com

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

6 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago