ಭಾಗ್ಯನಗರ: ಪಿ.ಓ.ಪಿ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟ ನಿಷೇಧ

ಕೊಪ್ಪಳ.01.ಆಗಸ್ಟ್.25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಭಾಗ್ಯನಗರ ಪ.ಪಂಚಾಯತ ವತಿಯಿಂದ ಕೆಲವು ಮಾರ್ಗಸೂಚಿಯನ್ನು ಜಾರಿಗೊಸಲಾಗಿದೆ.

ಮಾರ್ಗಸೂಚಿಗಳು: ರೋಗ ನಿರೋಧಕ ಶಕ್ತಿ ಇರುವ ಚಿಕ್ಕದಾದ ಮಣ್ಣಿನ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡುವುದು. ಬೀದಿಗಳಲ್ಲಿ ಗಣೆಶ ಮೂರ್ತಿಯನ್ನು ಪ್ರತಿಷ್ಠಾಪಿಸು ಪೂರ್ವದಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯದ ಅನುಮತಿಯನ್ನು ಪಡೆಯುವುದು. ಕೆರೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಮೂರ್ತಿ ಆರಾಧನೆಗಾಗಿ ಉಪಯೋಗಿಸುವ ವಸ್ತುಗಳನ್ನು (ಹೂವು, ಹಾರ, ವಸ್ತು, ಅಲಂಕಾರ ಸಾಮಗ್ರಿ ಇತ್ಯಾದಿ) ಜೈವಿಕವಾಗಿ ವಿಘಟನೆಯಾಗುವ ಪದಾರ್ಥಗಳನ್ನು ಬಳಸಿ ತಯಾರಿಸಬೇಕು. ಗಣೇಶ ಚತುರ್ಥಿ ಸಂದರ್ಭದಲ್ಲಿ ಪಿ.ಒ.ಪಿ ಗಣೇಶ, ಪ್ಲಾಸ್ಟಿಕ್ ಬಳಕೆ, ಪಟಾಕಿ ಸಿಡಿಸುವುದು ಧ್ವನಿ ವರ್ಧಕಗಳ ಬಳಕೆ ಮತ್ತು ಕಸವನ್ನು ರಸ್ತೆಗೆ ಬಿಸಾಡುವುದು ಮುಂತಾದ ಚಟುವಟಿಕೆಗಳ ಮೇಲೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು. ಮೂರ್ತಿಗಳು ವಿಸರ್ಜನೆಯಾದ 24 ಗಂಟೆಗಳ ಒಳಗೆ (ಬಾವಿ, ಹೊಂಡದ ಹತ್ತಿರ) ಸಾಮಗ್ರಿಗಳನ್ನು ಬಿಟ್ಟು ಹೋಗಬಾರದು. ಮೂರ್ತಿ ವಿಸರ್ಜನೆಯ ಸ್ಥಳಗಳಲ್ಲಿ ಘನತ್ಯಾಜ್ಯ ವಸ್ತುಗಳನ್ನು ಸುಡುವುದಕ್ಕೆ ನಿಷೇಧಿಸಲಾಗಿದೆ. ಹಬ್ಬದ ದಿನಗಳಲ್ಲಿ ಸಂಚಾರಿ ವಿಸರ್ಜಿಸುವ ತೊಟ್ಟಿಗಳನ್ನು ನಿರ್ದಿಷ್ಟವಾದ ಸ್ಥಳಗಳಲ್ಲಿ ನಿಲುಗಡೆ ವ್ಯವಸ್ಥೆಯನ್ನು ಮಾಡಲಾಗಿದೆ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆಯುವುದು. ಸಾಧ್ಯವಾದಷ್ಟು ಅರಶಿಣ/ಜೇಡಿ ಮಣ್ಣಿನಿಂದ ತಯಾರಿಸಿದ ಚಿಕ್ಕದಾದ ಮತ್ತು ಬಣ್ಣ ರಹಿತ ಮೂರ್ತಿಗಳನ್ನು ಪೂಜಿಸುವುದು ಮತ್ತು ವಿಸರ್ಜಿಸುವ ನಿರ್ದಿಷ್ಟ ಪಡಿಸಿರುವ ಸಂಚಾರಿ ಸ್ಥಳದಲ್ಲಿ ವಿಸರ್ಜಿಸುವುದು.

ಬಣ್ಣ ಇರುವ ಗಣೇಶನ ಮೂರ್ತಿಗಳನ್ನೇ ಪೂಜಿಸುವುದಾದರೆ ನೀರಿನಲ್ಲಿ ಕರಗುವ ಬಣ್ಣಗಳು ಮತ್ತು ವಿಷಯುಕ್ತವಲ್ಲದ ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಿ ತಯಾರಿಸಿದ ಮೂರ್ತಿಗಳನ್ನು ಬಳಸಿ ಜಲ ಮೂಲಗಳಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಸಾರ್ವಜನಿಕರು ಸಹಕರಿಸುವಂತೆ ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago