ಕೊಪ್ಪಳ.03.ಜುಲೈ.25:- ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಟಿ.ಎಸ್.ಪಿ, ಶೇ.40 ರ ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಪರಿಶಿಷ್ಟ ಪಂಗಡದ ಜನಾಂಗದವರಿಗೆ ನಿವೇಶನ ಖರೀದಿಸಲು ಮತ್ತು ಮನೆ ಮೇಲ್ಛಾವಣಿ ದುರಸ್ಥಿಗಾಗಿ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಪಟ್ಟಣದಲ್ಲಿ ವಾಸವಾಗಿರಬೇಕು. ಚಾಲ್ತಿ ಸಾಲಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಪಾಸ್ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳು, ಪ್ರಸ್ತುತ ವರ್ಷದ ಆಸ್ತಿ ತೆರಿಗೆ ಪಾವತಿಸಿದ ಪ್ರತಿ ಹಾಗೂ ಚಾಲ್ತಿ ವರ್ಷದ ಫಾರಂ.03 ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಜುಲೈ 15 ರೊಳಗೆ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.