13/08/2025 2:38 PM

Translate Language

Home » ಲೈವ್ ನ್ಯೂಸ್ » ಭಾರತೀಯ ಗ್ರಂಥಾಲಯ ಪಿತಾಮಹರನ್ನು ಸ್ಮರಿಸಿದ ಗ್ರಂಥಪಾಲಕರು

ಭಾರತೀಯ ಗ್ರಂಥಾಲಯ ಪಿತಾಮಹರನ್ನು ಸ್ಮರಿಸಿದ ಗ್ರಂಥಪಾಲಕರು

Facebook
X
WhatsApp
Telegram

ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು.

ಭಾರತೀಯ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಮುಖ್ಯಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಮಾತನಾಡಿ, ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ರವರ ಪೂರ್ಣ ಹೆಸರು ಶಿಯ್ಯಾಳಿ ರಾಮಾಮೃತ ರಂಗನಾಥನ್. ಇವರು 12 ಆಗಸ್ಟ್ 1892ರಲ್ಲಿ ತಮಿಳುನಾಡಿನ ತಂಜಾವೂರು ಜಿಲ್ಲೆಯ ಶಿಯ್ಯಾಳಿ ಎಂಬ ಗ್ರಾಮದಲ್ಲಿ ಜನಿಸಿದರು. ತಂದೆ ರಾಮಾಮೃತ ಅಯ್ಯರ್, ತಾಯಿ ಸೀತಾಲಕ್ಷ್ಮಿ, ಮೂಲತಃ ಡಾ. ಎಸ್.ಆರ್. ರಂಗನಾಥನ್ ರವರು ತಮ್ಮನ್ನು ಗುರುತಿಸಿಕೊಂಡಿದ್ದು ಒಬ್ಬ ಗಣಿತ ಪ್ರಾಧ್ಯಾಪಕರಾಗಿ. ನಂತರದ ದಿನಗಳಲ್ಲಿ ಶೈಕ್ಷಣಿಕ ವಿದ್ಯಾಸಂಸ್ಥೆಯಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿದರು.

ಈ ಸೇವೆ ಅವರನ್ನು ಗ್ರಂಥಾಲಯಗಳ ಬಗ್ಗೆ ಚಿಂತಿಸುವoತೆ ಮಾಡಿ ಮುಂದೆ ಗ್ರಂಥಾಲಯ ವಿಜ್ಞಾನಕ್ಕೆ ಮಹತ್ತರ ಕೂಡುಗೆ ನೀಡುವಂತೆ ಮಾಡಿತು. ಅವರು ಗ್ರಂಥಾಲಯ ವಿಜ್ಞಾನಕ್ಕೆ ಹಲವಾರು ಮಹತ್ವದ ಕೂಡುಗೆಗಳನ್ನು ನೀಡಿದ್ದಾರೆ. ಅವುಗಳೆಂದರೆ. ಗ್ರಂಥಾಲಯದ ಪಂಚಸೂತ್ರಗಳು, ದ್ವಿಬಿಂದು ವರ್ಗೀಕರಣ, ಸೂಚೀಕರಣ ಪರಾಮರ್ಶನ ಸೇವೆಗಳು ಎಂದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಉಮಾ ಹಳ್ಯಾಳ, ವಿಜಯಲಕ್ಷ್ಮೀ ವಡ್ಡಟ್ಟಿ, ನಾಗರಾಜನಾಯಕ ಡೊಳ್ಳಿನ ನಿರೂಪಿಸಿದರು, ಕೊಟ್ರಪ್ಪ ಬಿ. ವಂದಿಸಿದರು.

ವಿವಿಧೆಡೆ ಗ್ರಂಥಪಾಲಕರ ದಿನಾಚರಣೆ:* ಕೊಪ್ಪಳ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಸೇರಿದಂತೆ ಕೊಪ್ಪಳದ ಗಣೇಶ ನಗರದಲ್ಲಿರುವ ಮುಖ್ಯ ಶಾಖೆಯಲ್ಲಿ ಮತ್ತು ಗಂಗಾವತಿ ಶಾಖಾ ಗ್ರಂಥಾಲಯದಲ್ಲಿ ಹಾಗೂ ಜಿಲ್ಲೆಯ ವಿವಿಧೆಡೆ ಗ್ರಂಥಪಾಲಕ ದಿನಾಚರಣೆಯು ನಡೆಯಿತು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD