ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಲಿಂಗಾಯತರು ಲಿಂಗವನ್ನು ಬಿಚ್ಚಿಟ್ಟು ಹೋಗಬೇಕು.

ಬೀದರ.28.ಜನೆವರಿ.25.ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯಿಂದ ಹಮ್ಮಿಕೊಂಡಿರುವ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರು ತಾಳಿರುವ ದ್ವಂದ್ವ ನಿಲುವಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಟೀಕೆಗಳು ಕೇಳಿ ಬಂದಿವೆ.

ಭಾರತೀಯ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ. ಸೌಹಾರ್ದ ಕರ್ನಾಟಕ ಸಂಘಟನೆಯಿಂದ ಜ.19ರಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ‘ಬಹುತ್ವ ಸಂಸ್ಕೃತಿ ಭಾರತೋತ್ಸವ’ದಲ್ಲಿ ಬೀದರ್‌ ಜಿಲ್ಲೆಯಿಂದ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಬಸವ ಸೇವಾ ಪ್ರತಿಷ್ಠಾನದ ಅಕ್ಕ ಗಂಗಾಂಬಿಕೆ ಪಾಲ್ಗೊಂಡಿದ್ದರು.

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಲಿಂಗಾಯತರು ಲಿಂಗವನ್ನು ಬಿಚ್ಚಿಟ್ಟು ಹೋಗಬೇಕು. ಬಸವಣ್ಣ, ಅಂಬೇಡ್ಕರ್‌ ಅವರ ಹೆಸರು ಉಚ್ಚರಿಸಬಾರದು ಇಲ್ಲದಿದ್ದರೆ ಅವರು ಕುಲ ಕಂಟಕರು, ಬಸವ, ಅಂಬೇಡ್ಕರ್‌ ದ್ರೋಹಿಗಳು ಎಂಬ ಸಂದೇಶ ಕೊಡಬೇಕಾಗುತ್ತದೆ. ಬಸವತತ್ವ ಅನುಸರಣೆ ಮಾಡುತ್ತಿರುವವರು ಫ್ಯಾಸಿಸ್ಟರ್‌ ಜತೆಗೆ ಇರಬಾರದು ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಗಿತ್ತು.

ಭಾಗವಹಿಸಿದವರೆಲ್ಲರೂ ಅದಕ್ಕೆ ಸಹಮತ ಸೂಚಿಸಿದ್ದರು. ಆದರೆ, ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಬೀದರ್‌ ಹಾಗೂ ಭಾಲ್ಕಿಯಲ್ಲಿ ಇತ್ತೀಚೆಗೆ ಬಸವ ರಥಕ್ಕೆ ಚಾಲನೆ ಕೊಡುವ ಕಾರ್ಯಕ್ರಮದಲ್ಲಿ ಕ್ರಮವಾಗಿ ಅಕ್ಕ ಗಂಗಾಂಬಿಕೆ ಹಾಗೂ ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭಾಗವಹಿಸಿದ್ದರು. ಈಗ ಇದೇ ವಿಷಯ ವಿವಾದಕ್ಕೆ ಕಾರಣವಾಗಿದೆ.

ಅಕ್ಕ ಗಂಗಾಂಬಿಕೆ ಹಾಗೂ ಬಸವಲಿಂಗ ಪಟ್ಟದ್ದೇವರು ಬಹುತ್ವ ಭಾರತೋತ್ಸವದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಆದರೆ, ಕೆಲವೇ ದಿನಗಳಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ ಬಸವ ರಥದ ಚಾಲನೆ ಕಾರ್ಯಕ್ರಮದಲ್ಲಿ ಅಕ್ಕ ಗಂಗಾಂಬಿಕೆ ಅವರು ಭಾಗವಹಿಸಿ ಬಸವತತ್ವಕ್ಕೆ ಚ್ಯುತಿ ತಂದಿದ್ದಾರೆ.

ಬಸವಲಿಂಗ ಪಟ್ಟದ್ದೇವರು ಅವರ ಮಠದ ಕಿರಿಯ ಸ್ವಾಮೀಜಿ ಅವರಿಗೆ ಆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತಡೆಯದೇ ಮೌನ ವಹಿಸಿರುವುದು ಸರಿಯಲ್ಲ ಎಂಬ ಟೀಕೆಗಳು ಕೇಳಿ ಬಂದಿವೆ.

ಭಾರತೀಯ ಸಂಸ್ಕೃತಿ’ಬಸವವಾದಿಗಳು ಬಸವದ್ರೋಹಿಗಳು ಆಗಬಾರದು. ಇಬ್ಬರೂ ಮಠಾಧೀಶರಿಗೆ ಧಿಕ್ಕಾರವಿದೆ. ಮಠದ ಪರಂಪರೆಗೆ ವಿರುದ್ಧವಾಗಿ ಇಬ್ಬರೂ ನಡೆದುಕೊಂಡಿದ್ದಾರೆ. ಅವರ ಮಠ ಬೆಳೆದಿದ್ದು ಭಕ್ತರಿಂದ. ಪೀಠದಲ್ಲಿ ಕುಳಿತುಕೊಂಡಾಗ ಗಂಭೀರವಾಗಿ ನಡೆದುಕೊಳ್ಳಬೇಕು. ಹೋಗುವುದಿದ್ದರೆ ಎಲ್ಲಿಗೆ ಬೇಕಾದರೂ ಹೋಗಲಿ. ಲಿಂಗ, ವಿಭೂತಿ, ಮಠ ಬಿಟ್ಟು ಹೋಗಬೇಕು. ಯಾರು ಎಲ್ಲಿಗೆ ಬೇಕಾದರೂ ಹೋಗುವ ಸ್ವಾತಂತ್ರ್ಯವಿದೆ’ ಎಂದು ಚಿಂತಕ ಆರ್‌.ಕೆ. ಹುಡಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಶರಣರ ಮೂಲ ಆಶಯಗಳಿಗೆ ವ್ಯವಸ್ಥಿತವಾಗಿ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಅದರ ವಿರುದ್ಧ ಬಹುತ್ವ ಸಂಸ್ಕೃತಿ ಉತ್ಸವ ಬೆಳಕು ಚೆಲ್ಲಿದೆ. ಭಾರತೀಯ ಸಂಸ್ಕೃತಿ ಉತ್ಸವದ ಉದ್ದೇಶ ಸ್ಪಷ್ಟವಿಲ್ಲ. ಶರಣತತ್ವ, ಶರಣ ಸಂಸ್ಕೃತಿ ಪಾಲಿಸುವವರು ಜಾಗರೂಕರಾಗಿ ಹೆಜ್ಜೆ ಇಡಬೇಕು’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ ಅಭಿಪ್ರಾಯಪಟ್ಟಿದ್ದಾರೆ.

ಬೀದರ ಜಿಲ್ಲೆಯ’ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರಿಗೆ ಇರುವ ಬದ್ಧತೆ ಗುರುಬಸವ ಪಟ್ಟದ್ದೇವರಲ್ಲಿ ಕಾಣಿಸುತ್ತಿಲ್ಲ. ಪ್ರಬುದ್ಧತೆಯಿಂದ ನಡೆದುಕೊಳ್ಳುತ್ತಿಲ್ಲ. ಆರ್‌ಎಸ್‌ಎಸ್‌ ಹಿನ್ನೆಲೆಯ ಸಂಘಟನೆಗಳಿಗೆ ಮಠದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ.

ವಿರೋಧ ವ್ಯಕ್ತವಾದ ನಂತರ ಕೈಬಿಡುತ್ತಿದ್ದಾರೆ. ಇತ್ತೀಚೆಗೆ ಭಾರತೀಯ ಸಂಸ್ಕೃತಿ ಉತ್ಸವದ ಬಸವ ರಥಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವತತ್ವಕ್ಕೆ ಅಪಚಾರ ಬಗೆದಿದ್ದಾರೆ’ ಎಂದು ಹೆಸರು ಹೇಳಲಿಚ್ಛಿಸದ ಜಿಲ್ಲೆಯ ಮಠಾಧೀಶರೊಬ್ಬರು ಕಿಡಿ ಕಾರಿದ್ದಾರೆ.

ಗುರುಬಸವ ಪಟ್ಟದ್ದೇವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.

ಗುರುಬಸವ ಪಟ್ಟದ್ದೇವರುಆರ್‌.ಕೆ. ಹುಡಗಿ ಚಿಂತಕ ತಾತ್ವಿಕ ನೆಲೆ ಬಿಟ್ಟು ಹೋಗುವವರಿಗೆ ನಮ್ಮ ಧಿಕ್ಕಾರ ಇದೆ. ಬಸವ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಮಠಾಧೀಶರ ಬಗ್ಗೆ ಎಚ್ಚರದಿಂದ ಇರಬೇಕು

ಆರ್‌.ಕೆ.ಹುಡಗಿಬಸವರಾಜ ಧನ್ನೂರ ಜಿಲ್ಲಾಧ್ಯಕ್ಷ ಜಾಗತಿಕ ಲಿಂಗಾಯತ ಮಹಾಸಭಾ ಶರಣರ ವಿಚಾರಗಳಿಗೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು. ಹೊಂದಾಣಿಕೆ ಮಾಡಿಕೊಂಡು ಹೋಗಬಾರದು.

ಬಸವರಾಜ ಧನ್ನೂರ

‘ಎಲ್ಲೇ ಹೋದರೂ ನಾವು ಆರ್‌ಎಸ್‌ಎಸ್‌ ಆಗಲ್ಲ’ (ಚಿತ್ರ-ಅಕ್ಕ ಗಂಗಾಂಬಿಕೆ)

‘ಹೆಸರಿನಲ್ಲೇ ಸೌಹಾರ್ದ ಇದ್ದ ಕಾರಣ ಕಲಬುರಗಿಯಲ್ಲಿ ಏರ್ಪಡಿಸಿದ್ದ ಸೌಹಾರ್ದ ಕರ್ನಾಟಕ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಸೌಹಾರ್ದ ಕರ್ನಾಟಕ ಸೌಹಾರ್ದ ಭಾರತ ಎಂದು ಎಲ್ಲೇ ಕಾರ್ಯಕ್ರಮ ಮಾಡಿದರೂ ಹೋಗುತ್ತೇನೆ. ಬಸವಣ್ಣನವರ ಭಾವಚಿತ್ರ ಇಟ್ಟು ಬಸವ ರಥ ಎಂದು ಹೆಸರಿಟ್ಟಿದ್ದರು.

ರಥದ ಸ್ವಾಗತ ಕಾರ್ಯಕ್ರಮದಲ್ಲಿ ಕೆಲಕಾಲ ಪಾಲ್ಗೊಂಡಿದ್ದೆ. ನಾನು ಎಲ್ಲಿಗೆ ಹೋದರೂ ವಚನ ಸಾಹಿತ್ಯ ಬಸವತತ್ವದ ಬಗ್ಗೆ ಮಾತನಾಡುತ್ತೇನೆ. ಎಲ್ಲಿಗೆ ಹೋದರೂ ನಾವು ಆರ್‌ಎಸ್‌ಎಸ್‌ ಆಗಲ್ಲ’ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಅಕ್ಕ ಗಂಗಾಂಬಿಕೆ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಪಾಟೀಲ ಸೇಡಂ ಅವರು ಆರ್‌ಎಸ್‌ಎಸ್‌ ಬ್ಯಾನರ್‌ನಡಿ ಕಾರ್ಯಕ್ರಮ ಮಾಡುತ್ತಿಲ್ಲ. ಬಸವಣ್ಣನವರ ತತ್ವ ಪ್ರಸಾರಕ್ಕೆ ಯಾರೇ ಬಂದರೂ ಅವರಿಗೆ ಬೆಂಬಲ ಸೂಚಿಸುತ್ತೇವೆ. ಬಸವತತ್ವ ತಿಳಿಯದವರಿಗೆ ಹೇಳುತ್ತೇವೆ. ಅವರು ಕಾರ್ಯಕ್ರಮಕ್ಕೆ ಕರೆದಿದ್ದಾರೆ. ಅಲ್ಲಿಗೆ ಹೋದರೂ ವಚನ ಸಾಹಿತ್ಯದ ಬಗ್ಗೆಯೇ ಮಾತನಾಡುತ್ತೇವೆ ಎಂದು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

2 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

2 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

2 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

2 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

2 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

7 hours ago