ಭಾರತೀಯ ಸಂಸ್ಕೃತಿ ಉತ್ಸವ: ಬಸವ ರಥಕ್ಕೆ ಚಾಲನೆ ನೀಡಲಾಯಿತು.!

ಬೀದರ.21.ಜನೆವರಿ.25:- 29ರಿಂದ ಫೆ. 6ರವರೆಗೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆಯಲಿರುವ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ನಗರದಲ್ಲಿ ಬಸವ ರಥಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ನಗರದ ಗಣೇಶ ಮೈದಾನದಲ್ಲಿ ಅಲಂಕೃತ ಬಸವ ರಥಕ್ಕೆ ತಡೋಳಾ-ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಚಾಲನೆ ನೀಡಿದರು.

ಇದಕ್ಕೂ ಮುನ್ನ ನಗರದ ರಾಣಿ ಚನ್ನಮ್ಮ ವೃತ್ತ ಹಾಗೂ ಶಿವನಗರ ವೃತ್ತದಿಂದ ಕಾಲೇಜು ವಿದ್ಯಾರ್ಥಿಗಳು ಏಕಕಾಲಕ್ಕೆ ಜಾಥಾದಲ್ಲಿ ಗಣೇಶ ಮೈದಾನಕ್ಕೆ ಬಂದು ಸೇರಿದರು. ಅಲ್ಲಿ ರಥಕ್ಕೆ ಚಾಲನೆ ನೀಡಲಾಯಿತು.

ಬಳಿಕ ಮಾತನಾಡಿದ ವಿಕಾಸ ಅಕಾಡೆಮಿಯ ಜಿಲ್ಲಾ ಸಂಯೋಜಕ ರೇವಣಸಿದ್ದಪ್ಪ ಜಲಾದೆ,’ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಏಳೂ ಜಿಲ್ಲೆಗಳಲ್ಲಿ ಅಲ್ಲಿನ ಮಹಾತ್ಮರ ಹೆಸರುಗಳಲ್ಲಿ ರಥ ಸಂಚರಿಸಲಿವೆ. ಬಸವಣ್ಣನವರ ಕರ್ಮಭೂಮಿ ಇದಾಗಿರುವುದರಿಂದ ಅವರ ಹೆಸರಿನಲ್ಲಿ ಬೀದರ್‌ನಲ್ಲಿ ಬಸವ ರಥಕ್ಕೆ ಚಾಲನೆ ನೀಡಲಾಗಿದೆ’ ಎಂದು ಹೇಳಿದರು.

‘ಜಿಲ್ಲೆಯ ಕಮಲನಗರ, ಔರಾದ್‌, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌, ಚಿಟಗು‌ಪ್ಪ ತಾಲ್ಲೂಕಿನಲ್ಲಿ ಸಂಚರಿಸಿ ಬಳಿಕ ಕಲಬುರಗಿಗೆ ರಥ ಮುಖ ಮಾಡಲಿದೆ. ಕೆಲ ಜಿಲ್ಲೆಗಳ ರಥಗಳು ಸೇಡಂ ತಲುಪಿದರೆ, ಕೆಲವು ಕಲಬುರಗಿ ತಲುಪಲಿವೆ. ಅಲ್ಲಿ ನಡೆಯಲಿರುವ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಲಿವೆ’ ಎಂದು ಹೇಳಿದರು.

‘ಜ.29ರಿಂದ ಫೆ. 6ರವರೆಗೆ ಸೇಡಂನಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಜರುಗಲಿದೆ. ದೇಶದ ವಿವಿಧ ಭಾಗದ ಮಠಾಧೀಶರು, ಪ್ರಗತಿಪರ ರೈತರು, ಕ್ರೀಡಾಪಟುಗಳು, ವಿಜ್ಞಾನಿಗಳು, ಸಂಶೋಧಕರು, ರಾಜಕಾರಣಿಗಳು ಪಾಲ್ಗೊಳ್ಳುವರು. ಇದು ದಕ್ಷಿಣ ಭಾರತದ ಕುಂಭ ಮೇಳ’ ಎಂದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಫೌಂಡೇಶನ್‌ ಅಧ್ಯಕ್ಷ ಶಿವಶರಣಪ್ಪ ವಾಲಿ, ಕರ್ನಲ್‌ ಶರಣಪ್ಪ ಸಿಕೇನಪೂರೆ, ಪ್ರಗತಿಪರ ರೈತ ಮಹಾದೇವ ನಾಗೂರೆ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

53 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

57 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

1 hour ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

1 hour ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

1 hour ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago