ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ ಯುವಕರ ಯುವ ಕ್ರಾಂತಿ ಕೆಡವುತ್ತಿದೆ ಮತ್ತು ಪಾಶ್ಚಿಮತ್ಯ ಸಂಸ್ಕೃತಿಯ ಇದಕ್ಕೆ ಮೂಲ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ಎಸ್.ಶ್ರೀಧರ್ ತಿಳಿಸಿದರು.
ಅವರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ, ಹೇಮಾ ಎಜುಕೇಶನಲ್ ಐಂಡ್ ಚಾರಿಟೇಬಲ್ ಟ್ರಸ್ಟ್ ಬೀದರ, ಭವಾನಿ ಮಹಿಳಾ ಮಂಡಳ ಬೀದರ, ಸಂಯುಕ್ತ ಶಿಕ್ಷಣ ಸಂಸ್ಥೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಔರಾದ ತಾಲ್ಲೂಕಿನ ಕಂದಗೂಳ ಗ್ರಾಮದ ಡಾ. ಬಾಬು ಜಗಜೀವನರಾಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟಿçಯ ಮಾದಕ ವಸ್ತುವಿನ ವಿರೋಧ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಗಿನ ಒತ್ತಡದ ಜಗತ್ತಿನಲ್ಲಿ ಯುವ ಜನತೆ ವೇಗಕ್ಕೆ ತಾಳ ಹಾಕಲು ತಪ್ಪುದಾರಿ ಹಿಡಿಯುತ್ತಿದ್ದಾರೆ. ನಮ್ಮ ಇಂದಿನ ಜೀವನಶೈಲಿಯಲ್ಲಿ ಮೋಜು, ಮಸ್ತಿ, ತಡ ರಾತ್ರಿಯ ಪಾರ್ಟಿ ಇತ್ಯಾದಿಗಳು ಮಾಮೂಲಿಯಾಗಿವೆ. ಈ ಹಂತದಲ್ಲಿ ಹದಿ ಹರೆಯದ ಯುವ ಜನರು ದಾರಿ ತಪ್ಪುವುದು ಸಾಮಾನ್ಯ. ಈ ದಿಸೆಯಲ್ಲಿ ತಂದೆ-ತಾಯoದಿರ ಆಸರೆ, ಮಾರ್ಗದರ್ಶನ ಅತೀ ಅವಶ್ಯಕವಾಗಿದೆ ಎಂದರು.
ಈ ಸಂದರ್ಭದಲ್ಲಿ ಡಯಟ್ ಬೀದರನ ನಿವೃತ್ತ ಉಪನ್ಯಾಸಕರಾದ ಟಿ.ಜೆ.ಹಾದಿಮನಿ, ಬೀದರ ಹಿರಿಯ ಸಾಹಿತಿ ವಿಜಯಲಕ್ಷಿö್ಮÃ ಕೌಟಗೆ, ಕಂದಗೂಳ ಪ್ರಫುಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೈಜೊದ್ದಿನ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರತ್ನ ಸುಭಾಷ, ನಿಟ್ಟೂರ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಕ್ಷ ಬಸವರಾಜ ಪಾಟಿಲ್, ಸದಸ್ಯ ನಾಗರಾಜ ಹುಲಸೂರೆ, ಜಿಲ್ಲಾ ಮಹಿಳಾ ದೂರು ನಿರ್ವಹಣಾ ಸಮಿತಿ, ಕರ್ನಾಟಕ ಲೋಕಯುಕ್ತ ಬೀದರ, ಡಾ. ಬಾಬು ಜಗಜೀವನರಾಮ ಪ್ರೌಢ ಶಾಲೆಯ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…