ಬೀದರ.28.ಫೆ.25:- ಇಂದು ಭಾಲ್ಕಿ ಪಟ್ಟಣದಲ್ಲಿ 50 ವರ್ಷಗಳಿಂದ ಅಲೆಮಾರಿ ಜೀವನ ನಡೆಸಸುತ್ತಿರುವ ಸುಮಾರು 100 ಕುಟುಂಬಗಳು ಶೀಘ್ರವೇ ಭಾಲ್ಕಿಯ ಕಲವಾಡಿ ಬಳಿ ನಿರ್ಮಾಣವಾಗುತ್ತಿರುವ G+2 ಮಾದರಿಯ 400 ಹೊಸ ಫ್ಲಾಟ್ ಮನೆಗಳಿಗೆ ಸ್ಥಳಾಂತರಗೊಳ್ಳಲಿವೆ. ಈ ಕುಟುಂಬಗಳಿಗೆ ಗೌರವಯುತ ಮತ್ತು ಸುಸ್ಥಿರ ವಸತಿ ಒದಗಿಸುವ ಉದ್ದೇಶದಿಂದ ಈ ಪ್ರಯತ್ನ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಇಂದು ತಮ್ಮ ಜಾಗದಲ್ಲಿ ವಾಸಿಸುತ್ತಿರುವ ಈ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದರು. ಅವರು ನಿಮಗಾಗಿ ಹೊಸ ಮನೆಗಳನ್ನು ಉಚಿತವಾಗಿ ನೀಡಲಾಗುವದು, ನೀವು ಶೀಘ್ರವೇ ನಿಮ್ಮ ನೂತನ ಗೃಹಕ್ಕೆ ತೆರಳಲು ಸಿದ್ಧರಾಗಿರಿ ಎಂದು ತಿಳಿಸಿದರು.
ಇದು ಇಡೀ ರಾಜ್ಯಕ್ಕೆ ಮಾದರಿಯಂತಹ ಸಮಾಜಮುಖಿ ತೀರ್ಮಾನ. ಈ ಕುಟುಂಬಗಳು ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದರೂ, ಈಶ್ವರ ಖಂಡ್ರೆ ಅವರು ತಮ್ಮ ಸ್ವಂತ ಜಾಗದಲ್ಲಿ ಅವರಿಗೆ ಆಶ್ರಯ ನೀಡಿ, ಇದೀಗ ಸರ್ಕಾರದ ಸಹಯೋಗದಿಂದ ಹೊಸ ಮನೆಗಳಲ್ಲಿ ಸ್ಥಳಾಂತರಿಸಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.
ಈ ತೀರ್ಮಾನದಿಂದ ಅಲೆಮಾರಿ ಕುಟುಂಬಗಳಿಗೆ ಭದ್ರತೆಯ ಜೀವನ ದೊರಕಲಿದ್ದು, ಅವರ ಭವಿಷ್ಯ ಉಜ್ವಲವಾಗಲಿದೆ.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…