ಬೀದರ.04.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ಹೇಳಿದರು.
ಅವರು ರವಿವಾರ ಭಾಲ್ಕಿಯ ಸಂಸದರ ಕಛೇರಿ ಎದುರುಗಡೆ ನಡೆದ ಭಾಲ್ಕಿ ತಾಲೂಕಿನಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
2013-18ರಲ್ಲಿ ತಾವು ಸಚಿವರಾಗಿದ್ದಾಗ ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25,000 ಮನೆಗಳ ಹಕ್ಕು ಪತ್ರ ನೀಡಲಾಗಿತ್ತು, ಆದರೆ ಕಾರಣಾಂತರಗಳಿoದ ಪೂರ್ಣಗೊಳ್ಳಲಿಲ್ಲ, ಅದು ಈ ಅವಧಿಯಲ್ಲಿ ಪೂರ್ಣಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ನಮ್ಮ ಸರ್ಕಾರವು ಬಡವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.
ಗೃಹಲಕ್ಷೀ ಯೋಜನೆಯ ಅಡಿಯಲ್ಲಿ ಮನೆಯ ಮುಖ್ಯಸ್ಥೆಗೆ ಪ್ರತಿ ತಿಂಗಳು ಪ್ರತಿ 2000 ರೂಪಾಯಿ ನೀಡಲಾಗುತ್ತಿದೆ.
ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಹಾಗೂ ಗೃಹ ಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಭಾಲ್ಕಿ ತಾಲೂಕಿಗೆ ಒಟ್ಟು 8000 ಮನೆಗಳು ಮಂಜೂರು ಆಗಿವೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ 7000 ಮನೆ ಮತ್ತು ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 1000 ಮನೆಗಳು ಮಂಜೂರಾಗಿವೆ. ಜನರಿಗೆ ಅವಶ್ಯಕವಿರುವ ಅನ್ನ, ವಸತಿ, ಶಿಕ್ಷಣ, ಆರೋಗ್ಯ ಮುಂತಾದವುಗಳನ್ನು ನೀಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಸಂಸದ ಸಾಗರ ಈಶ್ವರ ಖಂಡ್ರೆ ಮಾತನಾಡಿ, ಮಳೆ, ಗಾಳಿ, ಬಿಸಿಲುಗಳಿಂದ ರಕ್ಷಿಸಲು ಒಂದು ಮನೆ ಅವಶ್ಯಕವಾಗಿದೆ. ಕೇವಲ ಭಾಲ್ಕಿ ಮಾತ್ರವಲ್ಲದೆ ಇಡೀ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ 1,20,000 ರೂ. ಹಾಗೂ ಪಜಾತಿ/ಪ.ಪಂಗಡ ವರ್ಗದವರಿಗೆ 1,75,000 ರೂ. ಮನೆ ನಿರ್ಮಾಣ ಹಣವನ್ನು ನೀಡಲಾಗುತ್ತಿದೆ .
ಈ ಹಣದಲ್ಲಿ ಉತ್ತಮವಾದ ಮನೆ ನಿರ್ಮಾಣ ಕಷ್ಟವಾಗುತ್ತದೆ. ಆದ್ದರಿಂದ ಒಂದು ಮನೆ 5 ರಿಂದ 7 ಲಕ್ಷದ ವರೆಗೆ ಹಣ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ನಿನ್ನೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಜಿಲ್ಲೆಯ ರೈಲ್ವೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಲ್ಕಿ ತಾಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪಾತ್ರವನ್ನು ವಿತರಿಸಲಾಯಿತು .
ಈ ಸಂದರ್ಭದಲ್ಲಿ ಭಾಲ್ಕಿ ತಹಸಿಲ್ದಾರ್ ಸೇರಿದಂತೆ ಇತರೆ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…