ಬೀದರ.28.ಫೆ.25:- ಇಂದು ತಾಲೂಕಾ ಪಂಚಾಯತನಲ್ಲಿ ಭಾಲ್ಕಿ ತಾಲೂಕಿನಾದ್ಯಂತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇಂದು (ಫೆ.27) ಭಾಲ್ಕಿಯ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಾ, ಜೂನ್ ಅಂತ್ಯದವರೆಗೆ ಯಾವುದೇ ಗ್ರಾಮ, ಬಡಾವಣೆ, ಜನವಸತಿ ಪ್ರದೇಶಗಳಲ್ಲಿ ನೀರಿನ ಕೊರತೆಯಾಗದಂತೆ ಸರ್ಕಾರದಿಂದಲೇ ಅಗತ್ಯ ಅನುದಾನವನ್ನು ಒದಗಿಸಲಾಗಿದ್ದು, ಇದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಂದಾಯ, ಪಂಚಾಯತ್ ರಾಜ್, ಜೆಸ್ಕಾ ಮತ್ತು ಪುರಸಭೆಯ ಅಧಿಕಾರಿಗಳು ಜಂಟಿಯಾಗಿ ಹಳ್ಳಿ-ಹಳ್ಳಿಗಳನ್ನು ಪರಿಶೀಲಿಸಿ, ಬೇಸಿಗೆ ಮುಗಿಯುವವರೆಗೆ ಯಾವುದೇ ಸಮಸ್ಯೆ ಉಂಟಾಗದಂತೆ ನಿರ್ವಹಿಸಬೇಕು ಎಂದು ಹೇಳಿದರು.
ಕಾರಂಜಾ ಬ್ಯಾರೇಜ್ ನೀರು ಬಿಡುಗಡೆ ಸಂಬಂಧ ತೀವ್ರ ಆಕ್ರೋಶ ಕಾರಂಜಾ ಬ್ಯಾರೇಜ್ನಿಂದ ಅನುಮತಿಯಿಲ್ಲದೆ ನೀರು ಬಿಡುವ ಕುರಿತು ಕಿಡಿಕಾರಿದ ಸಚಿವರು, ಈ ನಿರ್ಧಾರವನ್ನು ಯಾವ ಅಧಿಕಾರಿಗಳು ಕೈಗೊಂಡರು? ಯಾರ ಒತ್ತಡಕ್ಕೆ ಮಣಿದು ನೀರು ಬಿಡುಗಡೆ ಮಾಡಲಾಗಿದೆ? ಎಂಬುದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಡಯಾಲಿಸಿಸ್ ಸಿಬ್ಬಂದಿಗೆ ತಕ್ಷಣವೇ ವೇತನ ಬಿಡುಗಡೆ.
ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಿಬ್ಬಂದಿಗೆ ವೇತನ ಪಾವತಿಯಾಗದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ವೇತನ ಬಿಡುಗಡೆ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಸಿಬ್ಬಂದಿ ವೇತನ ಪಾವತಿಯಾಗದಿದ್ದರೆ ಅವರು ಹೇಗೆ ಕಾರ್ಯನಿರ್ವಹಿಸುತ್ತಾರೆ? ಎಂದು ಪ್ರಶ್ನಿಸಿದ ಸಚಿವರು, ಮುಂದಿನ ದಿನಗಳಲ್ಲಿ ಈ ರೀತಿಯ ವಿಳಂಬ ನಡೆಯಬಾರದು ಎಂದು ಎಚ್ಚರಿಸಿದರು.
ತೊಗರಿ ಖರೀದಿ ಪ್ರಕ್ರಿಯೆ ಸಕ್ರಮವಾಗಿ ನಡೆಯಬೇಕು.
ತಾಲೂಕಿನಲ್ಲಿ ತೊಗರಿ ಖರೀದಿ ಕೇಂದ್ರ ಪ್ರಾರಂಭವಾಗಿದ್ದು, ಹೆಸರು ನೋಂದಾಯಿಸಿದ ಎಲ್ಲಾ ರೈತರ ತೊಗರಿ ಖರೀದಿ ಮಾಡಬೇಕು ಎಂದು ಸಚಿವರು ತಿಳಿಸಿದರು. ತೊಗರಿ ಬೆಳೆ ಬೆಳೆದ ರೈತರಿಗೆ ಸರ್ಕಾರದ ನಿಗದಿ ಬೆಂಬಲ ಬೆಲೆ ಪೂರ್ತಿಯಾಗಿ ಲಭ್ಯವಾಗಬೇಕು ಎಂದು ಅವರು ಹೇಳಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ – ಶಿಕ್ಷಣ ಇಲಾಖೆಗೆ ಗುರಿ:
ಈ ಬಾರಿ ತಾಲೂಕಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಗೊಳಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಗುರಿ ನೀಡಲಾಯಿತು. ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವುದರಿಂದ ಬೋಧನಾ ತರಗತಿಗಳು ಹಾಗೂ ವಿಶಿಷ್ಟ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಫಲಿತಾಂಶ ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…