ಭೀಮ‌ ಸಂಭ್ರಮ ಕ್ರಿಕೆಟ್‌ ಟೂರ್ನಮೆಂಟ್ ಗೆ ಚಾಲನೆ‌ ನೀಡಿದ ಶಾಸಕ ಎ ಆರ್ ಕೆ.

ಚಾಮರಾಜನಗರ.13.ಎಪ್ರಿಲ್.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ರವರ  ಜಯಂತಿಯ ಹಿನ್ನಲೆ ಭೀಮ ಸಂಭ್ರಮ ಸೀಜನ್ 5 ರ ಕ್ರಿಕೆಟ್ ಟೂರ್ನಮೆಂಟ್ ನ್ನು ಶಾಸ‌ಕ‌ ಎ ಆರ್ ಕೃಷ್ಣಮೂರ್ತಿ ರವರು ಕ್ರಿಕೆಟ್ ಆಡುವುದರ ಮೂಲಕ ಶನಿವಾರ ಚಾಲನೆ‌  ನೀಡಿದರು.

ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಕಾಪಾಡಿಕೊಳ್ಳಬೇಕಾದರೆ ಕ್ರೀಡಾ ಚಟುವಟಿಕೆಗಳು ಅವಶ್ಯಕವಾಗಿದೆ.
ಯುವಕರು ಕ್ರೀಡಾ ಮನೋಭಾವನೆ ಜೊತೆಗೆ ಸಾಮಾಜಿಕ ಕಾಳಜಿಯನ್ನು ವಹಿಸಿಕೊಳ್ಳಬೇಕು ವೃದ್ದರನ್ನು, ನಿರ್ಗತಿಕರನ್ನು ಗೌರವಿಸಬೇಕು.



ಡಾ ಬಿ ಆರ್ ಅಂಬೇಡ್ಕರ್ ರವರ ಜಯಂತಿ ಹಿನ್ನಲೆ ಭೀಮ ಸಂಭ್ರಮ ಕ್ರಿಕೆಟ್ ಟೂರ್ನಮೆಂಟ್ ನ್ನು ಆಯೋಜಿಸಿದ್ದು ಸಂತಸವಾಗಿದೆ .ಅಂಬೇಡ್ಕರ್ ತತ್ವ,ಸಿದ್ದಾಂತ, ಚಿಂತನೆಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು.
ಸರಕಾರದಿಂದ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆಯಲು ಮಂಜೂರು ಮಾಡಲಾಗಿದೆ.
80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಯೋಜನೆ ತಯಾರಿಸಿಲಾಗಿದೆ ಅಭಿವೃದ್ಧಿಯೇ ನನ್ನ ಉದ್ದೇಶವಾಗಿದೆ.
ಇಂದಿನ ಪರಿಸ್ಥಿತಿಯಲ್ಲಿ ಸಮುದಾಯದೊಳಗೆ ಚಿಂತನ ಮಂಥನ ಸಭೆಗಳು ಆಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಜಮಾನರಾದ ಬಿ ನಾಗರಾಜು, ಕುಮಾರ್, ದೊರೆಸ್ವಾಮಿ, ರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೊಂಗನೂರು ಚಂದ್ರು,  ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಪಿ ಎಸ್ ಐ ಆಕಾಶ್,  ಕ್ರಿಕೆಟ್ , ಗ್ರಾಪಂ ಸದಸ್ಯರಾದ ಗುರುಲಿಂಗಯ್ಯ, ಪ್ರಸಾದ್, ಮಹೇಂದ್ರ, ಕ್ರಿಕೆಟ್ ಆಯೋಜಕರಾದ ಸಚಿನ್, ಮಹೇಂದ್ರ,  ಮುಖಂಡರಾದ ಸಿದ್ದರಾಜು, ರಾಮಕೃಷ್ಣ, ಎಂ ನಾಗರಾಜು, ಮಧು ಕೆಸ್ತೂರು,, ಕೆ ಚಿನ್ನಸ್ವಾಮಿ,  ನಾಗೇಶ್, ಕಿರಣ್ ಜೆ, ಸಂಜಯರಾಜು.  ಜೆ, ರಾಘವ, ವಿಶ್ವ, ಬಸವರಾಜು, ಕಟ್ನವಾಡಿ ರಮೇಶ್, ಅಜಯ್,  ಹಾಗೂ ಮುಖಂಡರು ಹಾಜರಿದ್ದರು.

ವರದಿಗಾರ: ಜಿ ಪ್ರಸನ್ನ ಕುಮಾರ್ ಕಿತ್ತೂರು

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

3 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

3 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

3 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago