ಮಂಗಳೂರು.29.ಮಾರ್ಚ್.25:- ಮಂಗಳೂರು ವಿಶ್ವವಿದ್ಯಾಲಯ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಲವು ಸ್ನಾತಕೋತ್ತರ ತರಗತಿಗಳನ್ನು ನಿಲ್ಲಿಸಲಾಗುವುದು ಎಂದು ಕುಲಪತಿ ಪ್ರೊ| ಪಿ.ಎಲ್. ಧರ್ಮ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು, ಕೆಲವು ಪಿಜಿ ತರಗತಿಗಳನ್ನು ನುರಿತ ಪ್ರಾಧ್ಯಾಪಕರ ಕೊರತೆಯಿಂದ ನಡೆಸಲು ಕಷ್ಟವಾಗುತ್ತಿದೆ.ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿ ಸ್ಥಗಿತಗೊಳಿಸಲಾಗುವುದು. ಜತೆಗೆ ಘಟಕ ಕಾಲೇಜುಗಳಲ್ಲಿನ ಸ್ನಾತಕೋತ್ತರ ಪದವಿಗಳ ಬದಲು ಮಂಗಳೂರು ವಿಶ್ವವಿದ್ಯಾನಿಲಯಕ್ಕೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದರು.
ಘಟಕ ಕಾಲೇಜುಗಳ ನಿರ್ವಹಣೆ ಕಷ್ಟಸಾಧ್ಯ
ವಿ ವಿ ಕಾಲೇಜಿನ ಸಂಧ್ಯಾ ಕಾಲೇಜು, ಮಂಗಳಗಂಗೋತ್ರಿ, ಬನ್ನಡ್ಕ, ನೆಲ್ಯಾಡಿ ಸೇರಿ ನಾಲ್ಕು ಘಟಕ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಈಗಿರುವ ಪರಿಸ್ಥಿತಿಯಲ್ಲಿ ಘಟಕ ಕಾಲೇಜುಗಳ ನಿರ್ವಹಣೆ ಕಷ್ಟ ಸಾಧ್ಯ. ಪದವಿ ಕಾಲೇಜುಗಳಿಗೆ ಕಾಯಂ ಉಪನ್ಯಾಸಕರ ಕೊರತೆ ಇದೆ.
ಅತಿಥಿ ಉಪನ್ಯಾಸಕರು ಉತ್ತಮವಾಗಿ ನಿರ್ವಹಿಸುತ್ತಿದ್ದರೂ, ಹಿರಿಯ ಅನುಭವಿ ಅಧ್ಯಾಪಕರ ಅಗತ್ಯ ಇದೆ. ಅದಕ್ಕಾಗಿ ಈ ಘಟಕ ಕಾಲೇಜುಗಳನ್ನು ಸರಕಾರಿ ಕಾಲೇಜು ಆಗಿ ಪರಿವರ್ತಿಸಲು ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ಒಳಗಿರುವ ಇನ್ನೂ ಬಳಕೆಯಾಗದ ಅಂತಾರಾಷ್ಟ್ರೀಯ ಹಾಸ್ಟೆಲ್ ಕಟ್ಟಡವನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಬಳಸಿಕೊಳ್ಳಲು ಚಿಂತನೆ ನಡೆದಿದೆ. ನಗರದಲ್ಲಿ ಸಾಕಷ್ಟು ಖಾಸಗಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಿವೆ. ಅವರಿಗೆ ಈ ಕಟ್ಟಡ ಬಳಕೆಗೆ ಸಾಧ್ಯವಾಗುವ ನಿಟ್ಟಿನಲ್ಲಿ ಬೇರೆ ಯಾವುದಾದರೂ ವಿವಿಯಿಂದ ಇಂಥ ಉಪಕ್ರಮ ಆಗಿದ್ದರೆ ಅದನ್ನು ಪರಿಶೀಲಿಸಿ, ಸರಕಾರದ ಅನುಮತಿ ಪಡೆದು ಕ್ರಮ ವಹಿಸಲಾಗುವುದು ಎಂದರು.
ಹಾಸ್ಟೆಲ್ ಕಟ್ಟಡದ ಕಾಮಗಾರಿಯ ಗುತ್ತಿಗೆ ಪಾವತಿ ಸೇರಿದಂತೆ ವಿವಿ ಕ್ಯಾಂಪಸ್ನ ವಿವಿಧ ಕಾಮಗಾರಿಗಳ ಸುಮಾರು 35ರಿಂದ 40ರಷ್ಟು ಗುತ್ತಿಗೆದಾರರಿಗೆ ಅಂದಾಜು 40 ಕೋ.ರೂ. ಪಾವತಿ ಬಾಕಿ ಇದೆ. ವಿವಿ ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದು, ಹಂತಹಂತವಾಗಿ ಬಾಕಿ ಪಾವತಿಸುವುದಾಗಿ ತಿಳಿಸಿದರು.
ಮಂಗಳೂರು ವಿವಿಗೆ 13 ಪೇಟೆಂಟ್ಗಳು ದೊರಕಿವೆ. ಹೀಗಾಗಿ ವಿವಿಯು ನಿರಂತರ ತರಗತಿ, ಪರೀಕ್ಷೆ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡಲಿದೆ ಎಂದವರು ಹೇಳಿದರು.
ಪಂಚಾಯತ್ ತೆರಿಗೆ ಬಾಕಿ
ಸ್ಥಳೀಯ ಗ್ರಾಮ ಪಂಚಾಯತ್ಗೆ ತೆರಿಗೆ ಬಾಕಿ ಪಾವತಿಸದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ವಿವಿ ಕ್ಯಾಂಪಸ್ನ ವಿಶ್ವಮಂಗಳ ಟ್ರಸ್ಟ್ಗೂ ತೆರಿಗೆ ವಿಧಿಸಿದೆ. ಅದು ವಿವಿ ಕ್ಯಾಂಪಸ್ನಲ್ಲಿ ಇದ್ದರೂ ಅದರ ವ್ಯವಹಾರ ವಿವಿ ವ್ಯಾಪ್ತಿಗೊಳಪಟ್ಟಿಲ್ಲ.
ಅಂತಾರಾಷ್ಟ್ರೀಯ ಹಾಸ್ಟೆಲ್ ಕಟ್ಟಡ ಬಳಕೆಯಾಗದ ಸೊತ್ತಾಗಿದ್ದು, ಅದನ್ನು ವಾಣಿಜ್ಯ ಎಂದು ಪರಿಗಣಿಸಿ ಅಧಿಕ ತೆರಿಗೆ ವಿಧಿಸಲಾಗಿದೆ. ಈ ಬಗ್ಗೆ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಬಳಕೆ ಆಗದ ಇವೆರಡೂ ಕಟ್ಟಡಗಳನ್ನು ಹೊರತುಪಡಿಸಿ ತೆರಿಗೆ ವಿಧಿಸಲು ಕೋರಲಾಗಿದೆ. ಆ ಬಗ್ಗೆ ಕ್ರಮ ಕೈಗೊಂಡ ತಕ್ಷಣವೇ ಹಂತ ಹಂತವಾಗಿ ತೆರಿಗೆ ಪಾವತಿಸುವ ಒಡಂಬಡಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…
ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…