09/06/2025 6:35 AM

Translate Language

Home » ಲೈವ್ ನ್ಯೂಸ್ » ಮಕ್ಕಳಿಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಕೊಡಿಸಿ

ಮಕ್ಕಳಿಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಕೊಡಿಸಿ

Facebook
X
WhatsApp
Telegram

ಬೀದರ.30.ಜನವರಿ.25:- ಬೀದರ್ ತಾಲೂಕಿನ ಜನವಾಡ.(ಯಾಕತಪುರ):- ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಮಾತೃ ಭಾಷೆ ಶಿಕ್ಷಣ ಬಹಳ ಪರಿಣಾಮಕಾರಿ ಆಗಿರುತ್ತದೆ. ಹೀಗಾಗಿ ಪಾಲಕರು ಮಕ್ಕಳಿಗೆ ಅನಿವಾರ್ಯವಾಗಿ ಅನಿವಾರ್ಯವಾಗಕನ್ನಡದಲ್ಲೇ ಶಿಕ್ಷಣ  ಕೊಡಿಸಬೇಕು ಎಂದು ಸಾಹಿತಿ ಸುಬ್ಬಣ್ಣ ಕರಕನಳ್ಳಿ ಹೇಳಿದರು.

ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಯಾಕತಪುರ ಗ್ರಾಮದ ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ಭಾಷೆ ಜಾಗೃತಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗೌಸುದ್ದಿನ್ ಅಬ್ದುಲ್ ಸಾಬ್ ಮಾತನಾಡಿ, ಮಾತೃ ಭಾಷೆ ಶಿಕ್ಷಣ ಮಕ್ಕಳಿಗೆ ಸರಳವಾಗಿ ಅರ್ಥವಾಗುತ್ತದೆ. ಮಹತ್ವದ ಸಾಧನೆ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.

ಉದ್ಘಾಟನೆ ನೆರವೇರಿಸಿದ ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ ಮಾತನಾಡಿ, ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.

ಅಶ್ವಿನಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕುಪೇಂದ್ರ ಮಾತನಾಡಿ, ಕನ್ನಡ ಶಾಸನಗಳು, ಸಾಹಿತ್ಯ ಹಾಗೂ ಸಂಸ್ಕೃತಿ ಶ್ರೀಮಂತವಾಗಿದೆ ಎಂದು ಹೇಳಿದರು.

ಪಿಕೆಪಿಎಸ್ ಅಧ್ಯಕ್ಷ ಸೈಯದ್ ಅಹ್ಮಮದ್ ಮುದ್ದೆ, ಗ್ರಾಮ ಪಂಚಾಯಿತಿ ಸದಸ್ಯರಾದ ರತ್ನಮ್ಮ, ಸಂಜೀವಕುಮಾರ ದಳಪತಿ, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಅಬ್ದುಲ್ ನಬಿ, ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಾವಿದ್ ಅಹಮ್ಮದ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ವಿನಾಯಕ ಇದ್ದರು.

ರಾಜ್ಯದಲ್ಲಿ ಮಾತ್ರಭಾಷಾ ಶಿಕ್ಷಣ ಮುಖ್ಯೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!