ಬೀದರ.30.ಜನವರಿ.25:- ಬೀದರ್ ತಾಲೂಕಿನ ಜನವಾಡ.(ಯಾಕತಪುರ):- ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಮಾತೃ ಭಾಷೆ ಶಿಕ್ಷಣ ಬಹಳ ಪರಿಣಾಮಕಾರಿ ಆಗಿರುತ್ತದೆ. ಹೀಗಾಗಿ ಪಾಲಕರು ಮಕ್ಕಳಿಗೆ ಅನಿವಾರ್ಯವಾಗಿ ಅನಿವಾರ್ಯವಾಗಕನ್ನಡದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಸಾಹಿತಿ ಸುಬ್ಬಣ್ಣ ಕರಕನಳ್ಳಿ ಹೇಳಿದರು.
ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಯಾಕತಪುರ ಗ್ರಾಮದ ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ಭಾಷೆ ಜಾಗೃತಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗೌಸುದ್ದಿನ್ ಅಬ್ದುಲ್ ಸಾಬ್ ಮಾತನಾಡಿ, ಮಾತೃ ಭಾಷೆ ಶಿಕ್ಷಣ ಮಕ್ಕಳಿಗೆ ಸರಳವಾಗಿ ಅರ್ಥವಾಗುತ್ತದೆ. ಮಹತ್ವದ ಸಾಧನೆ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ ಮಾತನಾಡಿ, ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.
ಅಶ್ವಿನಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕುಪೇಂದ್ರ ಮಾತನಾಡಿ, ಕನ್ನಡ ಶಾಸನಗಳು, ಸಾಹಿತ್ಯ ಹಾಗೂ ಸಂಸ್ಕೃತಿ ಶ್ರೀಮಂತವಾಗಿದೆ ಎಂದು ಹೇಳಿದರು.
ಪಿಕೆಪಿಎಸ್ ಅಧ್ಯಕ್ಷ ಸೈಯದ್ ಅಹ್ಮಮದ್ ಮುದ್ದೆ, ಗ್ರಾಮ ಪಂಚಾಯಿತಿ ಸದಸ್ಯರಾದ ರತ್ನಮ್ಮ, ಸಂಜೀವಕುಮಾರ ದಳಪತಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಅಬ್ದುಲ್ ನಬಿ, ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಾವಿದ್ ಅಹಮ್ಮದ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ವಿನಾಯಕ ಇದ್ದರು.
ರಾಜ್ಯದಲ್ಲಿ ಮಾತ್ರಭಾಷಾ ಶಿಕ್ಷಣ ಮುಖ್ಯೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…