ಮಣ್ಣಿನ ಫಲವತ್ತೆಯ ಬಗ್ಗೆ ವಿಶೇಷ ಕಾಳಜಿವಹಿಸಿ ತೋಟಗಾರಿಕೆ ಬೆಳೆ ಬೆಳೆಯಬೇಕು-ಡಾ.ಎಸ್.ವಿ.ಪಾಟೀಲ್


ಬೀದರ, 06ಡಿಸೆಂಬರ್24 ಬೀದರ:- ಜಿಲ್ಲೆಯ ರೈತರು ತಮ್ಮ ಹೊಲಗಳ ಮಣ್ಣಿನ ಫಲವತ್ತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು.


ಅವರು ಇತ್ತೀಚಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಮತು ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಇವರುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಜೇಶ ಬಸನಾಳೆ ಇವರ ಪಪಾಯ ಕ್ಷೇತ್ರದಲ್ಲಿ “ಪಪಾಯ ಬೆಳೆಯ ಕ್ಷೇತ್ರೋತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಪಪಾಯ ಬೆಳೆಯು ಒಂದು ಲಾಭದಾಯಕ ಬೆಳೆಯಾಗಿದ್ದು, ಸೂಕ್ತವಾದಂತಹ ತಳಿ ಆಯ್ಕೆ, ನೂರಿತ ವಿಜ್ಷಾನಿಗಳಿಂದ ಮಾಹಿತಿ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿದ್ದಲ್ಲಿ, ರೈತರು ಉತ್ತಮ ಲಾಭವನ್ನು ಪಡೆದು ಆರ್ಥಿವಾಗಿ ಸದೃಢರಾಗಬಹುದೆಂದರು.


ಔರಾದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಲಕ್ಷಿö್ಮÃ ಪಾಟೀಲ ಮಾತನಾಡಿ, ರೈತರು ಬೀದರ ಜಿಲ್ಲೆಯಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ತಾವು ಎದುರಿಸುತ್ತಿರುವಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಹಾಗೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ರೈತ ವರ್ಗಕ್ಕೆ ಲಭ್ಯವಿರುವಂತಹ ಯೋಜನೆಗಳು ಮತ್ತು ಸಹಾಯಾನುದಾನಗಳ ಬಗ್ಗೆ ಸಮಗ್ರವಾದಂತಹ ಮಾಹಿತಿಯನ್ನು ನೀಡಿದರು.


ಪ್ರಗತಿಪರ ರೈತ ರಾಜೇಶ ಬಸನಾಳೆ ಮಾತನಾಡಿ, ಪಪಾಯ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವು ತಮ್ಮ ಕ್ಷೇತ್ರದಲ್ಲಿ ಆಯೋಜಿಸಿರುವುದರಿಂದ ಹರ್ಷವನ್ನು ವ್ಯಕ್ತಪಡಿಸಿ, ಇದರಿಂದ ನಮ್ಮ ಗ್ರಾಮದ ಸುತ್ತಮುತ್ತಲಿನ ಗ್ರಾಮದ ರೈತರಿಗೂ ಸಹ ಪಪಾಯ ಬೆಳೆಯ ಬಗ್ಗೆ ಆಸಕ್ತಿಯನ್ನುಂಟು ಮಾಡಿದೆ ಎಂದು ಹೇಳಿದರು. ಮತ್ತು ತಮ್ಮ ವಯಕ್ತಿಕ ಪಪಾಯ ಬೆಳೆಯ ಬಗ್ಗೆ ಅನಿಸಿಕೆಯನ್ನು ಎಲ್ಲಾ ರೈತವರ್ಗ ಹಾಗೂ ಗಣ್ಯರೊಂದಿಗೆ ಹಂಚಿಕೊAಡರು.

ನಂತರ ಎಲ್ಲಾ ರೈತರಿಗೆ ರಾಜೇಶ ಬಸನಾಳೆಯವರು ಬೆಳೆದಿರುವಂತಹ ಪಪಾಯ ಬೆಳೆಯ ಕ್ಷೇತ್ರಕ್ಕೆ ಭೇಟಿ ನೀಡಿ, ಮೌಖೀಕವಾಗಿ ಮಾಹಿತಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಡಾ. ವಿ.ಪಿ. ಸಿಂಗ್., ವಿಸ್ತರಣಾ ಮುಂದಾಳು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಬೀದರ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿ ಹೇಳಿದರು. ಡಾ. ವಿಜಯಮಹಾಂತೇಶ, ಸಹಾಯಕ ಪ್ರಾಧ್ಯಾಪಕರು ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಪ್ರಶಾಂತ, ಸಹಾಯಕ ಪ್ರಾಧ್ಯಾಪಕರು, ಇವರು ವಂದಿಸಿದರು.

ಬೀದರ ಜಿಲ್ಲೆಯ 80 ಪ್ರಗತಿಪರ ರೈತರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಇದರ ಲಾಭ ಪಡೆದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago