ಔರಾದ:22. ಜನವರಿ.25:- ಔರಾದ’ತಾಲ್ಲೂಕಿನ ಕೆಲವು ಕಡೆ ಶಿಕ್ಷಕರು ಕುಡಿದು ಶಾಲೆಗೆ ಬರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಶಾಸಕ ಪ್ರಭು ಚವಾಣ್ ಸೂಚಿಸಿದರು.
ಔರಾದ (ಬಾ) ತಾಲ್ಲೂಕಿನ ಗಣೇಶಪುರ, ಬೋರಾಳ, ತುಳಜಾಪುರ, ಎಕಲಾರ ಸೇರಿದಂತೆ ವಿವಿಧೆಡೆ ಬುಧವಾರ ಗ್ರಾಮ ಸಂಚಾರ ನಡೆಸಿದ ಅವರು ಲಿಂಗಿ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬಂದು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಗಲಾಟೆ ಮಾಡುತ್ತಾರೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ ಎಂದು ಗರಂ ಆದರು.ನನ್ನ ಕ್ಷೇತ್ರದಲ್ಲಿ ಇಂಥ ಶಿಕ್ಷಕರು ಇರುವುದು ಬೇಡ. ಅಂತವರೆಲ್ಲರನ್ನು ಗುರುತಿಸಿ ಬೇರೆ ಕಡೆ ಕಳುಹಿಸಿ ಎಂದು ತಾಕೀತು ಮಾಡಿದರು.
ಜನಪ್ರಿಯ ಶಾಸಕರು ಗ್ರಾಮ ಸಂಚಾರದ ವೇಳೆ ಭೇಟಿ ನೀಡಿದ ಅನೇಕ ಶಾಲೆಗಳಲ್ಲಿ ಅವ್ಯವಸ್ಥೆ ಇದೆ. ಮಕ್ಕಳ ಕೊರತೆಯಿದೆ. ಕೆಲ ಕಡೆ ಶಿಕ್ಷಕರ ಸಮಸ್ಯೆಯೂ ಮಕ್ಕಳ ಕಲಿಕೆಗೆ ಅಡ್ಡಿಯಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸುವ ಕೆಲಸವಾಗಬೇಕು ಎಂದು ಹೇಳಿದರು.
ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೂ ಶಿಕ್ಷಕರು ಸಮಯಕ್ಕೆ ಶಾಲೆಗೆ ಬರುತ್ತಿಲ್ಲ ಎಂಬ ದೂರುಗಳಿದ್ದು, ಸರಿಪಡಿಸುವಂತೆ ಶಿಕ್ಷಣಾಧಿಕಾರಿಗೆ ಸೂಚಿಸಿದರು.
ತಾಲೂಕಾ ಅಧಿಕಾರಿಯಾದ ತಹಶೀಲ್ದಾರ ಮಲಶೆಟ್ಟಿ ಚಿದ್ರೆ, ತಾ.ಪಂ.ಇಒ ಅಧಿಕಾರಿ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಮುಖಂಡ ರಾಮಶೆಟ್ಟಿ ಪನ್ನಾಳೆ, ವಸಂತ ಬಿರಾದಾರ, ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ಖಂಡೋಬಾ ಕಂಗಟೆ, ದಯಾನಂಧ ಘುಳೆ ಹಾಗೂ ಮತ್ತಿತರರು ಹಾಜರಿದ್ದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…