ಮಧ್ಯಸ್ಥಗಾರಿಕೆ ಅಭಿಯಾನಕ್ಕೆ ನ್ಯಾ. ಹೆಚ್.ಎ. ಸಾತ್ವಿಕ್ ಚಾಲನೆ

ರಾಯಚೂರು.09.ಆಗಸ್ಟ್ .25: ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ, ರಾಷ್ಟಿçಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ದೇಶದಾದ್ಯಂತ 90 ದಿನಗಳ ಕಾಲ ನ್ಯಾಯಾಲಯಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನ ಅಂಗವಾಗಿ ಆಗಸ್ಟ್ 7ರ ಗುರುವಾರ ದಂದು ನಗರದ ಎ.ಪಿ.ಎಮ್.ಪಿ.ಸಿ ಹಿಂದುಗಡೆಯ ಬಸವೇಶ್ವರ ಕಾಲೋನಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಧ್ಯಸ್ಥಗಾರಿಕೆ ಅಭಿಯಾನಕ್ಕೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ. ಸಾತ್ವಿಕ್ ಅವರು ಚಾಲನೆ ನೀಡಿದರು.

ಅಭಿಯಾನಕ್ಕೆ ಈ ವೇಳೆ ಮಾತನಾಡಿ, ಈ ಮಧ್ಯಸ್ಥಗಾರಿಕೆ ಅಭಿಯಾನದಲ್ಲಿ ಎಲ್ಲಾ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸುವಂತಹ ಮಹತ್ವದ ಇಚ್ಛೆಯನ್ನು ಮತ್ತು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ನುರಿತ ವಕೀಲರಗಳು ಮತ್ತು ನ್ಯಾಯಾಧೀಶರು ಭಾಗವಹಿಸಿ ಕಕ್ಷಿಗಾರರಿಗೆ ಸಂಧಾನಕಾರರಾಗಿ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಅಷ್ಟೇ ಅಲ್ಲದೇ ಸಂಧಾನ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಕೂಡ ಭಾಗವಹಿಸಲಿದ್ದಾರೆ. ಜನರ ಪ್ರಕರಣಗಳಿಗೆ ಸಂಬoಧಪಟ್ಟoತಹ ಮಾಹಿತಿಗಳನ್ನು ಕೊಡುತ್ತಾರೆ ಎಂದರು.

ಸಂಧಾನ ಪ್ರಕ್ರಿಯೆ ಯಾವುದೇ ಕಕ್ಷಿಗಾರರು ಯಾವುದೇ ಕಾರಣಕ್ಕೂ ಹಣವನ್ನು ಖರ್ಚು ಮಾಡುವಂತಿಲ್ಲ. ಈ ಅಭಿಯಾನಕ್ಕೆ ಅಗತ್ಯವಿರುವ ಎಲ್ಲಾ ಖರ್ಚು ವೆಚ್ಚಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೇ ಭರಿಸಲಾಗುತ್ತದೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ಇತ್ಯಾರ್ಥ ಆದಲ್ಲಿ ಒಬ್ಬ ಕಕ್ಷಿಗಾರ ಸೊಲುತ್ತಾರೆ. ಮತ್ತು ಇನ್ನೊಬ್ಬ ಕಕ್ಷ್ಷಿಗಾರ ಗೆಲುವು ಸಾಧಿಸುತ್ತಾರೆ. ಆದರೆ ಮಧ್ಯಸ್ಥಿಕೆ ಮೂಲಕ ವಿಲೇವಾರಿಯಾದ ಪ್ರಕರಣದಲ್ಲಿ ಕಕ್ಷಿಗಾರರು ಪ್ರೀತಿ ವಿಶ್ವಾಸದಿಂದ ಪರಸ್ಪರ ರಾಜಿ ಆಗುವುದರಿಂದ, ಸೋಲು ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ರಾಯಚೂರಿನ ರೋಟರಿ ಕ್ಲಬ್ ಕೃಷ್ಣಾ ತುಂಗೆಯ ಅಧ್ಯಕ್ಷರಾದ ಪವನ್ ಕಿಶೋರ ಪಾಟೀಲ್, ರೋಟರಿ ಕ್ಲಬ್ ಅಸಿಸ್ಟೆಂಟ್ ಗೌರ್ವನರಾದ ಲಕ್ಷ್ಮೀಕಾಂತ್ ರೆಡ್ಡಿ, ರೋಟರಿ ಕ್ಲಬ್ ಕಾರ್ಯದರ್ಶಿಗಳಾದ ಅಮರೇಶ ರೆಡ್ಡಿ, ವಕೀಲರು, ನ್ಯಾಯಾಧೀಶರು ಸೇರಿದಂತೆ ಇತರರು ಇದ್ದರು.

prajaprabhat

Recent Posts

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

2 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

2 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

2 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

2 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

4 hours ago

ಗೃಹಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ಪಾಮಯ್ಯ ಮುರಾರಿ

ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…

4 hours ago