‘ಮನೆ ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮ ಜಾರಿ: ಗೃಹ ಸಚಿವ.ಡಾ. ಜಿ ಪರಮೇಶ್ವರ್

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರ ಮನೆ ಮೇನೆಗೆ ಪೊಲೀಸ್ ನೂತನ ಕಾರ್ಯಕ್ರಮ ಚಾಲನೆಗೆ ನಿರ್ಧರಿಸಿದೆ ಈ ಕಾರ್ಯಕ್ರಮಕೆ ಸಿದ್ಧತೆ ನಡೆಸಲಾಗಿದೆ.

ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾದ ಸಂದರ್ಭದಲ್ಲಿ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಪೊಲೀಸರೇ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಶಾಲಾ, ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲಿಯೂ ಭಾಗವಹಿಸಬೇಕು ಎಂದು ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಮಂಡ್ಯದ ಮದ್ದೂರಿನಲ್ಲಿ ಮಗು ಸಾವಿಗೀಡಾದ ಘಟನೆಯಿಂದ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಾಗಿದೆ. ಸಾರ್ವಜನಿಕ ವಲಯದಲ್ಲಿ ಇಂತಹ ಘಟನೆಗಳು ನಡೆಯಬಾರದು. ಇದಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ಸಂಚಾರವನ್ನು ಮೇಲ್ವಿಚಾರಣೆ ಮಾಡಿದ್ದೇನೆ. ಸಂಚಾರ ಸಮಸ್ಯೆ ಹೆಚ್ಚುತ್ತಿದೆ. ಮಳೆ ಬಂದರೆ ಸಂಚಾರ ಮತ್ತಷ್ಟು ಹೆಚ್ಚಾಗುತ್ತದೆ. ಆದರೆ, ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸಮನ್ವಯ ಸಾಧಿಸಿದರೆ ಸಮಸ್ಯೆಯನ್ನು ಪರಿಹರಿಸಬಹುದು. ನಾವು ಶಾಶ್ವತ ಪರಿಹಾರವನ್ನು ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

3 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

4 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

8 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

16 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

18 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

18 hours ago