ಮಹಾಬೋಧಿಯನ್ನು ಬೌದ್ಧರ ಸುಪರ್ದಿಗೆ ಒಪ್ಪಿಸುವಂತೆ 15 ರಂದು ಯಳಂದೂರಿನಲ್ಲಿ ಕಾಲ್ನಡಿಗೆ ಜಾಥಾ.
ಯಳಂದೂರು.13.ಮಾರ್ಚ.25:- ಗೌತಮ ಬುದ್ಧರು ಬೋಧಿ ಪ್ರಾಪ್ತಿ ಪಡೆದ ಪವಿತ್ರ ಪುಣ್ಯ ಭೂಮಿಯಲ್ಲಿ ಸುಮಾರು ಎರಡು ದಶಕಗಳಿಂದ ಬೌದ್ಧ ಭಿಕ್ಕುಗಳು ಮತ್ತು ಉಪಾಸಕರ ಸರ್ವರ ಒಡಗೂಡಿ ಹೋರಾಟಗಳು ನಡೆಯುತ್ತಿವೆ. ಈ ಹೋರಾಟದ ಉದ್ದೇಶವೆಂದರೆ ಬಿಹಾರ ರಾಜ್ಯದ ಬುದ್ಧಗಯಾ ಮಹಾಬೋಧಿ ಮಹಾ ವಿಹಾರವನ್ನು ಬೌದ್ಧರಿಗೆ ವಹಿಸಬೇಕು ಹಾಗೂ 1949 ರ ಬಿ ಟಿ ಎಂ ಸಿ ಕಾಯ್ದೆ ರದ್ದು ಪಡಿಸಬೇಕು.
1949 ರ ಈ ಬಿ ಟಿ ಎಂ ಸಿ (ಬುದ್ದಿಸ್ಟ್ ಟೆಂಪಲ್ ಮ್ಯಾನೇಜೆಂಟ್ ಕಮಿಟಿ) ಕಾಯ್ದೆಯ ಪ್ರಕಾರ ಇದರಲ್ಲಿ ನಾಲ್ಕು ಜನ ಹಿಂದೂ ಪುರೋಹಿತ ಶಾಹಿಗಳು, ನಾಲ್ಕು ಬೌದ್ಧ ಭಿಕ್ಕುಗಳು ಹಾಗೂ ಒಬ್ಬರು ಜಿಲ್ಲಾ ಅಧಿಕಾರಿಗಳು ಒಟ್ಟು ಒಂಭತ್ತು ಜನರು ಒಳಗೊಂಡ ಈ ಸಮಿತಿ ಇದನ್ನು ನಿರ್ವಹಿಸಿಕೊಂಡು ಬರುತ್ತಿರುವುದು ನಿಜವೇ ಆದರೂ ಇದರಲ್ಲಿ ಬೌದ್ಧರಿಗೆ ಅನ್ಯಾಯ ಆಗುತ್ತಿದೆ.
ಈ ಸ್ಥಳದಲ್ಲಿ ಪುರೋಹಿತ ಶಾಹಿಗಳ ಪ್ರಾಬಲ್ಯ ಹೆಚ್ಚಾದಂತೆ ಬುದ್ಧನ ಪವಿತ್ರ ಸ್ಥಳದಲ್ಲಿ ಹಿಂದೂ ಆಚರಣೆಗಳು, ಪಿಂಡದಾನ ಈ ರೀತಿ ನಾನಾ ಬಗೆಯ ಆಚರಣೆಗಳು ನಡೆಯುತ್ತಿದ್ದು, ಬುದ್ಧರ ವೈಚಾರಿಕತೆ ಮತ್ತು ವೈಜ್ಞಾನಿಕತೆ ಈ ಸ್ಥಳದಲ್ಲಿ ನಾಶವಾಗುತ್ತಿದೆ.
ಈ ನಿಟ್ಟಿನಲ್ಲಿ ಹೇಗೆ ಚರ್ಚ್ ಗಳು ಕ್ರಿಶ್ಚಿಯನ್ನರ ಸುಪರ್ದಿಗೆ, ಮಸೀದಿಗಳು ಮುಸ್ಲಿಮರ ಸುಪರ್ದಿಗೆ, ಹಿಂದೂ ದೇವಸ್ಥಾನಗಳು ಪುರೋಹಿತರ ಸುಪರ್ದಿಗೆ ವಹಿಸಿದಿಯೋ ಹಾಗೆಯೇ ಬುದ್ದಗಯಾ ಮಹಾಬೋಧಿ ಮಹಾ ವಿಹಾರವನ್ನು ಬೌದ್ಧರ ಸುಪರ್ದಿಗೆ ವಹಿಸುವಂತೆ ಆಗ್ರಹಿಸಿ ಮಾನ್ಯ ರಾಷ್ಟ್ರಪತಿಯವರು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಈ ಮೂಲಕ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದ್ದು.
ದಿನಾಂಕ 15 ರ ಶನಿವಾರದಂದು ಬೆಳಗ್ಗೆ 10.30 ಗಂಟೆಗೆ ಯಳಂದೂರು ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಯಿಂದ ಕೊಳ್ಳೆಗಾಲ ಮುಖ್ಯ ರಸ್ತೆಯ ಮಾರ್ಗವಾಗಿ ತಾಲ್ಲೂಕು ಆಡಳಿತ ಕಛೇರಿಯವರಗೆ ಕಾಲ್ನಡಿಗೆ ಜಾಥಾ ಹಾಗೂ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸರ್ವ ಬೌದ್ಧ-ಭೀಮ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪ್ರತಿಭಟನಾ ಧರಣಿಯನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಹೊನ್ನೂರು ಮಹಾವನ ಬುದ್ಧವಿಹಾರದ
ಪ್ರಧಾನ ಭಿಕ್ಕುಗಳಾದ ಭಂತೆ ಬುದ್ಧರತ್ನ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ.ಪ್ರಸನ್ನಕುಮಾರ್ ಕೆಸ್ತೂರು
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…