ಮಹಿಳೆಯರಿಂದ ಮಹಿಳೆಯರಿಗಾಗಿ ಜಿಲ್ಲಾಡಳಿತದಿಂದ ವಿಶೇಷ ಮಹಿಳಾ ದಿನಾಚರಣೆ

ಬೀದರ.10.ಮಾರ್ಚ.25: – ಮಹಿಳೆ ಜಗತ್ತಿನ ಅದ್ಭುತ ಶಕ್ತಿಯಾಗಿದ್ದು, ಸರಕಾರಿ ಸೇವೆ ಮಾಡುವ ಮಹಿಳೆಯರು ಕುಟುಂಬ ಹಾಗೂ ಕಚೇರಿ ಎರಡನ್ನು ಸರಿದೂಗಿಸಿಕೊಂಡು ಹೊಗುತ್ತಾರೆಂದು ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯಪಟ್ಟರು.


ಇಂದು ಜಿಲ್ಲಾ ರಂಗಮoದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾದ ವಿಶೇಷ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡುತ್ತಾ, ವೇದಿಕೆಯಲ್ಲಿ ಎಲ್ಲರೂ ಮಹಿಳೆಯರೇ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮುಂಬರುವ ಎಲ್ಲ ದಿನಮಾನಗಳಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಶೇ.50 ರಷ್ಟು ಮಹಿಳೆಯರು ವೇದಿಕೆಯಲ್ಲಿ ಉಪಸ್ಥಿತರಿರಬೇಕೆಂದರು.


ಕೆಲಸ ಮಾಡುವ ಮಹಿಳೆಯರು ಕಚೇರಿಗೆ ಬರುವ ಮುನ್ನ ಮನೆಯಲ್ಲಿಯ ಎಲ್ಲ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಕಚೇರಿಗೆ ಹಾಜರಾಗುತ್ತಾರೆ. ಸರಕಾರಿ ಸೇವೆಯ ಮಾಸಿಕ ವೇತನ ಆರ್ಥಿಕತೆಯ ದೃಷ್ಟಿಯಿಂದ ಪರಿಗಣಿಸಲಾಗುತ್ತದೆಯಾದರೂ ಅವರ ಕೌಟುಂಬಿಕ ಮನೆಗೆಲಸ ಲೆಕ್ಕಕ್ಕೆ ಬರುವುದಿಲ್ಲ.

ಅಡುಗೆ, ಮನೆಗೆಲಸ ಮಾಡಿ ಕಚೇರಿಗೆ ಬರುವ ಮಹಿಳೆಯರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಮಹಿಳೆಯರು ಮನೆಯಲ್ಲಿ ಗಂಡು, ಹೆಣ್ಣು ಮಕ್ಕಳಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ ಸರಿಸಮಾನವಾಗಿ ಪರಿಗಣಿಸಿದರೆ ಮುಂಬರುವ ದಿನಮಾನಗಳಲ್ಲಿ ಪ್ರತಿ ಕ್ಷೇತ್ರದಲ್ಲಿ ಶೇ.50 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಕಾಣಬಹುದಾಗಿದೆಯೆಂದು ತಿಳಿಸಿದರು.


ಇಡೀ ರಂಗಮAದಿರ ತುಂಬೆಲ್ಲ ಮಹಿಳೆಯರೇ ಭಾಗಿಯಾಗಿದ್ದು ವಿಶೇಷವಾಗಿತ್ತು. ಮುಕ್ತವಾಗಿ ಚರ್ಚೆಗಳು ನಡೆದವು. ಮಹಿಳಾ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿಗಳು ಕೇಕ್ ಕಟ್ ಮಾಡಿದರು.


ಈ ಕಾರ್ಯಕ್ರಮದಲ್ಲಿ ಹಂಸಾ ಗಿರೀಶ ಬದೋಲೆ, ಶೈನಿ ಪ್ರದೀಪ ಗುಂಟಿ, ಗೀತಾ ಶಿವಕುಮಾರ ಶೀಲವಂತ, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಜಿಲ್ಲಾ ಸಹಕಾರ ಸಂಘಗಳ ಉಪನಿರ್ದೇಶಕರಾದ ಮಂಜುಳಾ ಸಿ.ಎಸ್. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶಿಂಧು ಎಸ್. ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ ಮುನ್ನಳ್ಳಿ, ಹುಮನಾಬಾದ ತಹಸೀಲ್ದಾರ ಅಂಜುಮ, ಹುಮನಾಬಾದ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೀಪಿಕಾ ನಾಯರ, ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳಾದ ಸುವರ್ಣಾ, ಹಿ.ವ.ಕಲ್ಯಾಣ ಇಲಾಖೆಯ ಸುಜಾತಾ, ಮೀನುಗಾರಿಕೆ ಇಲಾಖೆಯ ಜಾನವಿ, ಅಂಚೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಗಲಾ ಭಾಗವತ, ಎಡಿಎಲ್‌ಆರ್ ಗಳಾದ ಶ್ವೇತಾ, ರಾಜೇಶ್ವರಿ, ಸಾಹಿತಿಗಳಾದ ಪಾರ್ವತಿ ಸೋನಾರೆ, ಸ್ತಿçÃoರೋಗ ತಜ್ಞರಾದ ಉಮಾ ದೇಶಮುಖ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಮಹಿಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago