ಬೀದರ.11.ಮಾರ್ಚ.25: – ಮಹಿಳೆ ಜಗತ್ತಿನ ಅದ್ಭುತ ಶಕ್ತಿಯಾಗಿದ್ದು, ಸರಕಾರಿ ಸೇವೆ ಮಾಡುವ ಮಹಿಳೆಯರು ಕುಟುಂಬ ಹಾಗೂ ಕಚೇರಿ ಎರಡನ್ನು ಸರಿದೂಗಿಸಿಕೊಂಡು ಹೊಗುತ್ತಾರೆಂದು ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯಪಟ್ಟರು.
ಇಂದು ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾದ ವಿಶೇಷ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡುತ್ತಾ, ವೇದಿಕೆಯಲ್ಲಿ ಎಲ್ಲರೂ ಮಹಿಳೆಯರೇ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮುಂಬರುವ ಎಲ್ಲ ದಿನಮಾನಗಳಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಶೇ.50 ರಷ್ಟು ಮಹಿಳೆಯರು ವೇದಿಕೆಯಲ್ಲಿ ಉಪಸ್ಥಿತರಿರಬೇಕೆಂದರು.
ಕೆಲಸ ಮಾಡುವ ಮಹಿಳೆಯರು ಕಚೇರಿಗೆ ಬರುವ ಮುನ್ನ ಮನೆಯಲ್ಲಿಯ ಎಲ್ಲ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಕಚೇರಿಗೆ ಹಾಜರಾಗುತ್ತಾರೆ. ಸರಕಾರಿ ಸೇವೆಯ ಮಾಸಿಕ ವೇತನ ಆರ್ಥಿಕತೆಯ ದೃಷ್ಟಿಯಿಂದ ಪರಿಗಣಿಸಲಾಗುತ್ತದೆಯಾದರೂ ಅವರ ಕೌಟುಂಬಿಕ ಮನೆಗೆಲಸ ಲೆಕ್ಕಕ್ಕೆ ಬರುವುದಿಲ್ಲ. ಅಡುಗೆ, ಮನೆಗೆಲಸ ಮಾಡಿ ಕಚೇರಿಗೆ ಬರುವ ಮಹಿಳೆಯರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳೆಯರು ಮನೆಯಲ್ಲಿ ಗಂಡು, ಹೆಣ್ಣು ಮಕ್ಕಳಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ ಸರಿಸಮಾನವಾಗಿ ಪರಿಗಣಿಸಿದರೆ ಮುಂಬರುವ ದಿನಮಾನಗಳಲ್ಲಿ ಪ್ರತಿ ಕ್ಷೇತ್ರದಲ್ಲಿ ಶೇ.50 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಕಾಣಬಹುದಾಗಿದೆಯೆಂದು ತಿಳಿಸಿದರು.
ಇಡೀ ರಂಗಮಂದಿರ ತುಂಬೆಲ್ಲ ಮಹಿಳೆಯರೇ ಭಾಗಿಯಾಗಿದ್ದು ವಿಶೇಷವಾಗಿತ್ತು. ಮುಕ್ತವಾಗಿ ಚರ್ಚೆಗಳು ನಡೆದವು. ಮಹಿಳಾ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿಗಳು ಕೇಕ್ ಕಟ್ ಮಾಡಿದರು.
ಈ ಕಾರ್ಯಕ್ರಮದಲ್ಲಿ ಹಂಸಾ ಗಿರೀಶ ಬದೋಲೆ, ಶೈನಿ ಪ್ರದೀಪ ಗುಂಟಿ, ಗೀತಾ ಶಿವಕುಮಾರ ಶೀಲವಂತ, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಜಿಲ್ಲಾ ಸಹಕಾರ ಸಂಘಗಳ ಉಪನಿರ್ದೇಶಕರಾದ ಮಂಜುಳಾ ಸಿ.ಎಸ್. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶಿಂಧು ಎಸ್. ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ ಮುನ್ನಳ್ಳಿ, ಹುಮನಾಬಾದ ತಹಸೀಲ್ದಾ ಅಂಜುಮ, ಹುಮನಾಬಾದ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೀಪಿಕಾ ನಾಯರ, ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳಾದ ಸುವರ್ಣಾ, ಹಿ.ವ.ಕಲ್ಯಾಣ ಇಲಾಖೆಯ ಸುಜಾತಾ, ಮೀನುಗಾರಿಕೆ ಇಲಾಖೆಯ ಜಾನವಿ, ಅಂಚೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಗಲಾ ಭಾಗವತ, ಎಡಿಎಲ್ಆರ್ ಗಳಾದ ಶ್ವೇತಾ, ರಾಜೇಶ್ವರಿ, ಸಾಹಿತಿಗಳಾದ ಪಾರ್ವತಿ ಸೋನಾರೆ, ಸ್ತ್ರೀ ರೋಗ ತಜ್ಞರಾದ ಉಮಾ ದೇಶಮುಖ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಮಹಿಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…