ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಂಸತ್ತಿನಲ್ಲಿ ಅಂಗೀಕಾರವಾಗಿ 2 ವರ್ಷ ಇನ್ನು ಜಾರಿಗೆ ಬಂದಿಲ್ಲಾ.!

ಬೆಂಗಳೂರು.03.ಏಪ್ರಿಲ್.25:- ಕೇಂದ್ರ ಸರಕಾರ ಸಂಸದನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗಿ ಎರಡು ವರ್ಷವಾಗಿದೆ. ಇನ್ನೂ ಯಾವಾಗ ಜಾರಿಗೆ ತರುತ್ತಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸವಾಲು ಹಾಕಿದ್ದಾರೆ.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಧರಣಿಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷ ಮಹಿಳೆಯರನ್ನು ಮತ್ತು ದೇಶದ ಜನರಿಗೆ ಪ್ರತಿದಿನ ಮೂರ್ಖರನ್ನಾಗಿಸುತ್ತಿದ್ದಾರೆ. ಕೇಂದ್ರ ಸರಕಾರಕ್ಕೆ ಮಹಿಳೆಯರ ಮತ ಬೇಕು. ದೇವಿ, ಸರಸ್ವತಿ, ಲಕ್ಷ್ಮಿ, ನಾರಿಶಕ್ತಿ ಎಂದು ಪ್ರತಿವರ್ಷ ಮಾ.8ಕ್ಕೆ ಮಹಿಳಾ ದಿನಾಚರಣೆ ಮಾಡಿ ಬಿಜೆಪಿಯವರು ಮತ್ತು ನರೇಂದ್ರ ಮೋದಿ ಅವರು ಹೊಗಳುತ್ತಾರೆ. ಆದರೆ ನಿಜವಾದ ಗೌರವವಿದ್ದರೆ ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಚುನಾವಣೆಗಾಗಿ ಶೇ.33ರಷ್ಟು ಮೀಸಲಾತಿ ಪಾಸ್ ಮಾಡಿದ್ದಾರೆ. ಆದರೆ ಇನ್ನೂ ಜಾರಿ ಮಾಡಿಲ್ಲ. ನಮಗೆ ಸಿಹಿ ತೋರಿಸಿದ್ದಾರೆ. ಆದರೆ ಅದನ್ನು ತಿನ್ನಲು ಬಿಡುತ್ತಿಲ್ಲ. ರಾಜ್ಯ, ದೇಶದಲ್ಲಿ ಮಹಿಳೆಯರು ಶೇ.50ರಷ್ಟು ಇದ್ದೇವೆ. ಸಂಸತ್ತಿನಲ್ಲಿ ಶೇ.15, 16ರಷ್ಟು ಮಾತ್ರ ಇದ್ದೇವೆ. ರಾಜ್ಯದಲ್ಲೂ ಶೇ.4ರಷ್ಟು ಜನ ಮಹಿಳೆಯರು ವಿಧಾನ ಸಭೆಯಲ್ಲಿ ಇದ್ದಾರೆ. 224 ಜನರಲ್ಲಿ 10ಜನ ಮಾತ್ರ ಮಹಿಳೆಯರು ಇರೋದು, ನಾವು ಎಷ್ಟು ದಿನ ಸುಮ್ಮನೆ ಇರಬೇಕು ಎಂದು ಪ್ರಶ್ನಿಸಿದರು.

ರಾಜ್ಯ, ದೇಶದಲ್ಲಿ ಅರ್ಧದಷ್ಟು ಮಹಿಳೆಯರು ಇದ್ದರೂ ಕೂಡ, ಮಹಿಳೆಯರನ್ನು ಪ್ರತಿನಿಧಿಸುವವರು ಇಲ್ಲ. ಕೇಂದ್ರ ಬಿಜೆಪಿಗೆ ಮಹಿಳೆಯರಾಗಿರಲಿ, ಅಲ್ಪಸಂಖ್ಯಾತರಾಗಿರಲಿ, ದಲಿತರಾಗಿರಲಿ ಅವರ ಬಗ್ಗೆ ಕಾಳಜಿ ಇಲ್ಲ ಆದರೆ, ಅಧಿಕಾರ ಬೇಕು. ರಾಜ್ಯದಲ್ಲೂ ಬಿಜೆಪಿ ಇದ್ದಾಗ ಅಭಿವೃದ್ಧಿ ಮಾಡಲಿಲ್ಲ ಎಂದು ಕಿಡಿಕಾರಿದರು.

ಇಡೀ ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ. ಅವಕಾಶಗಳು ಸಿಗುತ್ತಿಲ್ಲ. 2ವರ್ಷಗಳಿಂದ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ. ಮಹಿಳೆಯರ ಸಬಲೀಕರಣ ಆಗಬೇಕಾದರೆ ಶೀಘ್ರದಲ್ಲೇ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಧರಣಿಯಲ್ಲಿ ಭಾಗವಹಿಸಿದ್ದ ಮಹಿಳಾ ಕಾಂಗ್ರೆಸ್ ಸದಸ್ಯರು ಮಹಿಳಾ ವಿರೋಧಿ ಕೇಂದ್ರ ಸರಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago