ಬೀದರ.23.ಮಾರ್ಚ.25: – ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮುಖ್ಯ ವಾಹಿನಿಗೆ ಬರಬೇಕು ಎಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಅವರು ರವಿವಾರದಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಹಾಗೂ ಜಿಲ್ಲಾ ಪಂಚಾಯತ್ ಬೀದರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪ್ರತಾಪ ನಗರದ ಸರಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2025 ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸಧೃಡರಾಗುವುದು ಬಹಳ ಮುಖ್ಯವಾಗಿದೆ, ಕುಟುಂಬ ಅಥವಾ ಗಂಡನಿಗೆ ಆರ್ಥಿಕವಾಗಿ ಅವಲಂಬಿತರಾಗಿದ್ದರೆ ಅವರು ಹೇಳಿದ ಹಾಗೆ ಬದುಕಬೇಕಾಗುತ್ತದೆ. ಒಂದು ವೇಳೆ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಸ್ವತಂತ್ರವಾಗಿ ಜೀವನ ಮಾಡಬಹುದು ಮತ್ತು ಯಾವುದೇ ಕಟ್ಟುಪಾಡುಗಳಿಗೆ ಒಳಪಡುವುದಿಲ್ಲ. ಅದಕ್ಕಾಗಿಯೇ ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರಿಗೆ ಉಚಿತವಾಗಿ ಬಸ್ ಸಂಚಾರ, ಮಾಸಿಕ 2000 ಸಹಾಯಧನ, 10 ಕಿಲೋ ಅಕ್ಕಿ, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಇದರಿಂದಾಗಿ ಮಹಿಳೆಯರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ:* ಆರ್ಥಿಕ ಸ್ವಾವಲಂಬನೆ, ಉದ್ಯೋಗಾವಕಾಶ, ಉದ್ಯಮಶೀಲತೆ ಮತ್ತು ಶಿಕ್ಷಣವೇ ನಿಜವಾದ ಸಬಲೀಕರಣಕ್ಕೆ ದಾರಿ ಮಾಡಿಕೊಡುತ್ತದೆ. ಇಂತಹ ವಸ್ತು ಪ್ರದರ್ಶನಗಳು ಮತ್ತು ಮಾರುಕಟ್ಟೆ ಮೇಳಗಳು ಗ್ರಾಮೀಣ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ಪ್ರಚಾರ ಮತ್ತು ಮಾರಾಟ ಮಾಡಲು ಉತ್ತಮ ವೇದಿಕೆಯಾಗುತ್ತದೆ. ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಆರ್ಥಿಕವಾಗಿ ಸ್ವಾವಲಂಬಿಯಾಗಿ ಬೆಳೆದು ನಮ್ಮ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಕೆ. ಬೆಲ್ದಾಳೆ ಮಾತನಾಡಿ,. ನಮ್ಮ ದೇಶದಲ್ಲಿ ಮಹಿಳೆಯರಿಗೆ ಉನ್ನತವಾದ ಸ್ಥಾನಮಾನ ನೀಡಲಾಗಿದೆ. ಹೆಣ್ಣನ್ನು ದೇವರು ಎಂದು ಪೂಜಿಸುವ ಏಕೈಕ ದೇಶ ನಮ್ಮದಾಗಿದ್ದು, ರಾಷ್ಟಿçÃಯ ಗ್ರಾಮಿಣ ಜೀವನೋಪಾಯ ಯೋಜನೆಗಳು ಗ್ರಾಮೀಣ ಬಡ ಕುಟುಂಬಗಳ ಬಡತನ ನಿವಾರಣೆಯ ಉದ್ದೇಶ ಹೊಂದಿದೆ. ಈ ಯೋಜನೆಯು ಅವರಿಗೆ ಲಾಭದಾಯಕ ಸ್ವಉದ್ಯೋಗ ಮತ್ತು ನುರಿತ ವೇತನ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅನುವು ಮಾಡಿಕೊಡುತ್ತದೆ ಇದನ್ನು ಪ್ರತಿಯೊಬ್ಬ ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ಗಿರೀಶ ಬದೋಲೆ ಅವರು ಮಾತನಾಡಿ, ಮಹಿಳೆಯರನ್ನು ಸಬಲೀಕರಣ ಮತ್ತು ಸಶಕ್ತಿಕರಣಯಾಗಿಸಲು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್ಆರ್ಎಲ್ಎಂ) ಅನೇಕ ಪ್ರಯತ್ನಗಳು ನಡೆಯುತ್ತಿವೆ. ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳು, ಮಹಿಳಾ ಉತ್ಪಾದಕ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ 2 ಅಕ್ಕ ಕೆಫೆ ಪ್ರಾರಂಭವಾಗಲಿವೆ, ಇವು ಸಂಪೂರ್ಣವಾಗಿ ಮಹಿಳೆಯರಿಂದ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಉತ್ತಮವಾಗಿ ಕಾರ್ಯಚಟುವಟಿಕೆ ನಡೆಸಿದ ಹುಮನಾಬಾದ ತಾಲ್ಲೂಕಿನ ಘೊಡವಾಡಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟ ಘೋಡವಾಡಿ (ಪ್ರಥಮ ಸ್ಥಾನ), ಭಾಲ್ಕಿ ತಾಲ್ಲೂಕಿನ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಒಕ್ಕೂಟ ನಿಟ್ಟೂರ್ (ದ್ವಿತೀಯ ಸ್ಥಾನ), ಚಿಟಗುಪ್ಪ ತಾಲ್ಲೂಕಿನ ಮಂಗಲಗಿ ಗ್ರಾಮ ಪಂಚಾಯತ ಮಟ್ಟದ ಸಂಜಿವಿನಿ ಮಹಿಳಾ ಒಕ್ಕೂಟಕ್ಕೆ (ತೃತೀಯ ಸ್ಥಾನ) ಬಹುಮಾನ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ, ಬೀದರ ವಿಶ್ವವಿದ್ಯಾಲಯದ ಕುಲಸಚಿವೆಯಾದ ಸುರೇಖಾ, ಜಿಲ್ಲಾ ಯೋಜನಾ ನಿರ್ದೇಶಕರಾದ ಜಗನ್ನಾಥ ಮೂರ್ತಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿಯಾದ ಸುವರ್ಣಾ, ರಜಿಯಾ ಬಳಬಟ್ಟಿ, ಗೀತಾವಾಣಿ ಸೇರಿದಂತೆ ಇತರೆ ಅಧಿಕಾರಿಳು ಉಪಸ್ಥಿತರಿದ್ದರು.
ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ…
ಲಡಾಖ್ನಲ್ಲಿ, ಒಂದು ವಾರದ ಬೇಸಿಗೆ ಕಾರ್ನೀವಲ್ 2025 ಇಂದು ಡ್ರಾಸ್ನಲ್ಲಿರುವ ಮೇಜರ್ ವಿಶ್ವನಾಥನ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಈ ತಿಂಗಳ 9…
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…