ಬೀದರ.16.ಮಾರ್ಚ.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಬೀದರ ಜಿಲ್ಲೆಯ, ಎಲ್ಲಾ ಸರಕಾರಿ / ಖಾಸಗಿ ಕಚೇರಿಗಳು, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮೆಗಳು, ಕಾರ್ಖಾನೆಗಳು/ ಗಾರ್ಮೇಟ್ಸ್ ಫ್ಯಾಕಟರಿಗಳು, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬರುವ ಸರಕಾರಿ / ಖಾಸಗಿ ಸಂಸ್ಥೆಗಳು, ಅಂಚೆ ಕಚೇರಿಗಳು, ಹಾಗೂ ಬ್ಯಾಂಕ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ/ಸಿಬ್ಬಂದಿಯವರ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಎಲ್ಲಾ ಇಲಾಖೆಗಳಲ್ಲಿ ಒಂದು ಆಂತರಿಕ ದೂರು ಸಮಿತಿ ರಚನೆ ಮಾಡಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮ, 2013 ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ.
ಎಲ್ಲಿ ಆಂತರಿಕ ದೂರು ಸಮಿತಿ ರಚನೇಯಾಗಿರುವುದಿಲ್ಲವೋ, ಅಲ್ಲಿ ಕೂಡಲೇ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು. ಹಾಗೂ ಈಗಾಗಲೇ ದೂರು ಸಮಿತಿ ರಚನೆಯಾಗಿದ್ದಲ್ಲಿ, ಆಂತರಿಕ ದೂರು ಸಮಿತಿಗಳ ಮುಂದೆ ಬಾಕಿ ಉಳಿದಿರುವ ಪ್ರಕರಣಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿರುವ ಬಗ್ಗೆ ಪರಿಶೀಲಿಸುವುದು ಹಾಗೂ ಆಂತರಿಕ ದೂರು ಸಮಿತಿಯ ವಿವರಗಳನ್ನು ಪರಿಷ್ಕ್ರತ SHe Box Portal ನಲ್ಲಿ ಅಪ್ಲೋಡ್ ಮಾಡುವುದು. “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ” ಕಾಯ್ದೆಯ ಪ್ರತಿಯೊಂದು ನಿಂಬಂಧನೆಗಳ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸುವುದು ಹಾಗೂ ಔಪಚಾರಿಕ ಮತ್ತು ಔಪಚಾರಿಕವಲ್ಲದ/ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ಸುರಕ್ಷಿತ ಕೆಲಸದ ವಾತಾವರಣವನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚಿಸಲಾಗಿದೆ.
ಸದರಿ ವರದಿಯನ್ನು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ದಿನಾಂಕ: 25-03-2025ರ ಒಳಗಾಗಿ ರಚನೆಯಾದ ಸಮಿತಿಯ ಮಾಹಿತಿಯನ್ನು ಕಡ್ಡಾಯವಾಗಿ SHe Box Portal ನಲ್ಲಿ ಅಪ್ಲೋಡ್ ಮಾಡಿ, ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರ ದೂರವಾಣಿ ಸಂಖ್ಯೆ: 9980702545, 8310032095 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.10.ಜೂನ್.25:- ಉನ್ನತ ಶಿಕ್ಷಣ ಇಲಾಖೆಯ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ…
ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳು 1) ಪ.ಜಾತಿ, ಪ.ವರ್ಗ, 2) ಹಿಂದುಳಿದ ವರ್ಗಗಳ 22 ವಸತಿ…
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…