ಮಹಿಳೆಯ ತಲೆ ಮೇಲೆ KSRTC ಬಸ್

ತುಮಕೂರು.21.ಜುಲೈ .25:- ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದ ಬಳಿ ಘಟನೆ ನಡೆದಿದ್ದು, ಮೃತರನ್ನು ರಾಜೇಶ್ವರಿ (45) ಅಂತ ಗುರುತಿಸಲಾಗಿದೆ.

ಸೋಮವಾರ ಬೆಳ್ಳಂಬೆಳಗ್ಗೆ ತುಮಕೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮಹಿಳೆಯ ತಲೆ ಮೇಲೆ KSRTC ಬಸ್ ಹತ್ತಿದ ಎನ್ನಲಾಗಿದ್ದು , ಸ್ಥಳದಲ್ಲೇ ರಾಜೇಶ್ವರಿ ಪ್ರಾಣಬಿಟ್ಟಿದ್ದಾರೆ.

ಮೃತ ರಾಜೇಶ್ವರಿಯನ್ನು ತುಮಕೂರು ತಾಲೂಕಿನ ಅರಕೆರೆ ಗ್ರಾಮದವರು ಎನ್ನಲಾಗಿದೆ. ನಗರದ ಗುಬ್ಬಿ ಗೇಟ್ ಸರ್ಕಲ್ ಬಳಿ ರಾಜೇಶ್ವರಿ ಹೋಟೆಲ್ ನಡೆಸುತ್ತಿದ್ದರು.ಇವತ್ತು ಬೆಳಗ್ಗೆ ಹೋಟೆಲ್ ಗೆ ತೆರಳುತ್ತಿರುವಾಗ ನಡೆದಿರುವ ಅಪಘಾತ ನಡೆದಿದೆ.

ಸ್ಥಳಕ್ಕೆ ತುಮಕೂರು ನಗರ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ತುಮಕೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರು ಶಾಕ್..!

ಘಟನೆಯಿಂದ ಪ್ರತ್ಯಕ್ಷದರ್ಶಿಗಳು ಶಾಕ್ ಆಗಿದ್ದಾರೆ. ರಕ್ತದ ಮಡುವಿನಲ್ಲಿ ರಾಜೇಶ್ವರಿ ನೋಡಿ ಎಲ್ಲರೂ ಮರುಕಪಟ್ಟಿದ್ದಾರೆ. ಮೃತ ರಾಜೇಶ್ವರಿ ಕುಟುಂಬದ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಮೃತ ರಾಜೇಶ್ವರಿ ಶವವನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಇನ್ನು ರಾಜ್ಯದಲ್ಲಿ ಮಳೆ ಅಬ್ಬರ ಜೋರಿದ್ದು, ಕಳೆದ 2 ದಿನಗಳಿಂದ ವರುಣ ಅಬ್ಬರಿಸುತ್ತಿದ್ದಾನೆ. ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಿಂದ ಭಾನುವಾರ ಒಂದೇ ದಿನ ಐವರು ಮೃತಪಟ್ಟಿದ್ದಾರೆ.

ಭಾರೀ ಮಳೆಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಬ್ಬಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗ ಬೆಂಗಳೂರು ಮೂಲದ ರಮೇಶ್ ನೀರುಪಾಲಾಗಿದ್ದಾರೆ. ಫಾಲ್ಸ್ ಮುಂದೆ ಫೋಟೊಗೆ ಪೋಸ್ ಕೊಡುವಾಗಲೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋದ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೈಸೂರಿನ ಮೀನಾಕ್ಷಿಪುರ ಬಳಿಯ ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಕೆಆರ್ಎಸ್ ಹಿನ್ನೀರಿನ ಪ್ರದೇಶ ಮೋಜು ಮಸ್ತಿಗೆ ಕುಖ್ಯಾತಿ ಪಡೆದಿದೆ. ಸಮುದ್ರದಂತೆಯೇ ಕಾವೇರಿ ಹಿನ್ನೀರಿನಲ್ಲಿ ಅಲೆಗಳು ಬರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಭಾನುವಾರ ಮೋಜು ಮಸ್ತಿಗೆಂದು ಬಂದಿದ್ದ ಮಂಡ್ಯ ನರ್ಸಿಂಗ್ ಕಾಲೇಜಿನ ಪ್ರಶಾಂತ್, ಸಿದ್ದೇಶ್, ಕೃಷ್ಣ ದಾರುಣವಾಗಿ ಸಾವಿಗೀಡಾಗಿದ್ದಾರೆ

ಇನ್ನು, ಕರ್ನಾಟಕದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಜುಲೈ 24ರವರೆಗೂ ಕರಾವಳಿ, ಮಲೆನಾಡು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 23 ಹಾಗೂ 24ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.

ಇನ್ನು, ಕರಾವಳಿ ಹಾಗೂ ಕರಾವಳಿ ತಟದ ಹತ್ತಿರ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಠಿಣ ಸೂಚನೆ ನೀಡಲಾಗಿದೆ.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

33 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

40 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago